ಉಡುಪಿ: ಶ್ರೀಭಗವತೀ ನಾಸಿಕ್ ಕಲಾ ತಂಡ- ಜನ್ಮಾಷ್ಟಮಿ ವೇಷದ ಪೋಸ್ಟರ್ ಬಿಡುಗಡೆ

ಉಡುಪಿ: ಶ್ರೀಭಗವತೀ ನಾಸಿಕ್ ಕಲಾ ತಂಡ ಕಸ್ತೂರ್ಬಾನಗರ ಇವರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 7ನೇ ವರ್ಷದ ವಿಶೇಷ ವೇಷದೊಂದಿಗೆ ಜನರನ್ನು ರಂಜಿಸಲಿದ್ದಾರೆ.

ಈ ಕಾರ್ಯಕ್ರಮದ ಪೋಸ್ಟರ್‌ನ್ನು ಭಾನುವಾರ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಬಿಡುಗಡೆ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಮೇಶ ಕಾಂಚನ್, ಕೆ.ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಅಣ್ಣಯ್ಯ ಸೇರಿಗಾರ್,  ಸಂಸ್ಥೆಯ ಗೌರವಾಧ್ಯಕ್ಷ ಶ್ರೀಧರ ದೇವಾಡಿಗ, ಶಶಿರಾಜ್ ಕುಂದರ್, ಚರಣ್‌ರಾಜ್ ಬಂಗೇರ, ಕಲಾ ತಂಡದ ಪ್ರಣಮ್, ಸುಧೀರ್, ಉಮೇಶ್ ಉಪಸ್ಥಿತರಿದ್ದರು.

ಮಗುವಿನ ವೈದ್ಯಕೀಯ ಚಿಕಿತ್ಸೆಯ ಸಹಾಯಾರ್ಥವಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿಯಂದು ವೇಷಧರಿಸಿ ಸಂಗ್ರಹಿಸಿದ ಮೊತ್ತವನ್ನು ರಕ್ತದ ಕಾಯಿಲೆಯಿಂದ ಬಳಲುತ್ತಿರುವ ಅನ್ವಿಶ್ ನಾಯ್ಕ ಎಂಬ 4 ವರ್ಷದ ಮಗುವಿನ ಶಸ್ತ್ರಚಿಕಿತ್ಸೆಗೆ ನೀಡುವುದಾಗಿ ಸಂಘಟಕರು ತಿಳಿಸಿದ್ದಾರೆ .

Leave a Reply

Your email address will not be published. Required fields are marked *

error: Content is protected !!