ಉಡುಪಿ ಹಿಂದೂ ಜಾಗರಣ ವೇದಿಕೆ: ಬೃಹತ್ ಪಂಜಿನ ಮೆರವಣಿಗೆ

ಉಡುಪಿ: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಪಂಜಿನ ಮೆರವಣಿಗೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಚಾಲನೆ ನೀಡಿದರು.

ಬಳಿಕ ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ ಕೋರ್ಟ್ ರಸ್ತೆ, ಹಳೆ ಡಯಾನ ಸರ್ಕಲ್, ಕೆ.ಎಂ ಮಾರ್ಗವಾಗಿ ಸಾಗಿ ಬಂದು ಜಟ್ಕಾ ಸ್ಟ್ಯಾಂಡ್ ನಲ್ಲಿ ಸಮಾಪನಗೊಂಡಿತು. ಆ ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಸೂರಜ್ ಮಂಗಳೂರು ದಿಕ್ಸೂಚಿ ಭಾಷಣ ಮಾಡಿದರು.

ಉಡುಪಿ ದಂತ ವೈದ್ಯ ಡಾ.ವಿಜೇಂದ್ರ ವಸಂತ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಅಂಡಾರು ದೇವಿಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ನಿಟ್ಟೂರು, ಪ್ರಭಾಕರ ಪೂಜಾರಿ, ವಿಜಯ ಕೊಡವೂರು, ಹಿಂದೂ ಮುಖಂಡ ಮಹೇಶ್ ಬೈಲೂರು ಹಾಗೂ ನೂರಾರು ಜಾಗರಣ ವೇದಿಕೆಯ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!