ರಾಜ್ಯ ಸರಕಾರವನ್ನು ಜಿಹಾದಿ, ಮತೀಯವಾದಿಗಳು ನಡೆಸುತ್ತಿದ್ದಾರೆ- ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ವಾಗ್ದಾಳಿ

ಉಡುಪಿ: ಸಿಎಂ ಸಿದ್ದರಾಮಯ್ಯ ಬರೇ ಮುಖವಾಡವಷ್ಟೇ , ಸರಕಾರವನ್ನು ಜಿಹಾದಿ, ಮತೀಯವಾದಿಗಳು ನಡೆಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರರಾದ ಹರಿಪ್ರಕಾಶ್ ಕೋಣೆಮನೆ ವಾಗ್ದಾಳಿ ನಡೆಸಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಗಣೇಶೋತ್ಸವ ಮೆರವಣಿಗೆಯ ವೇಳೆ ಕಲ್ಲುತೂರಾಟ, ಪೆಟ್ರೋಲ್ ಬಾಂಬ್ ಎಸೆದು ಹಿಂದೂಗಳ ಅಂಗಡಿಗಳನ್ನು ಬಸ್ಮ ಮಾಡಲಾಗಿದೆ. ಗೃಹ ಸಚಿವರು ಈ ಘಟನೆಯನ್ನು ಅಕಸ್ಮಿಕ ಎಂದು ಹೇಳಿದ್ದಾರೆ. ಇದು ಅತ್ಯಂತ ಹೇಡಿತನ ಹಾಗೂ ನಾಚಿಕೆಗೇಡಿನ ಹೇಳಿಕೆ.‌ ಮೆರವಣಿಗೆಯ ವೇಲೆ ಒಬ್ಬನೇ ಪೊಲೀಸ್ ಪೇದೆ ಇರಲಿಲ್ಲ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಘಟನೆ ನಡೆದರೂ ಸಹ ಬಂದೋಬಸ್ತ್ ಮಾಡಿರಲಿಲ್ಲ, ಯಾವ ಸ್ಥಳದಿಂದ ಮೆರವಣಿಗೆ ಹೋಗಬೇಕೆಂದು ಪೊಲೀಸರ ಬದಲಾಗಿ ಜಿಹಾದಿಗಳು ನಿರ್ದರಿಸುವ ಮಟ್ಟಿಗೆ ಈ ಸರಕಾರ ಅಧೋಗತಿ ತಲುಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ, ಡಿಕೆಶಿ ಮುಖವಾಡ ಮಾತ್ರ, ಸರಕಾರವನ್ನು ಜಿಹಾದಿಗಳು ಹಾಗೂ ಮತೀಯವಾದಿಗಳು ನಡೆಸುತ್ತಿದ್ದಾರೆ. ಅಂಗಡಿ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರ ಹಾಗೂ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು ವಿದೇಶದಲ್ಲಿ ರಾಹುಲ್ ಗಾಂಧಿ ಭಾರತದಲ್ಲಿ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಹೇಳಿದ್ದಾರೆ. ನೆಹರೂ- ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನ ಮಾನಸಿಕತೆ ಇವತ್ತು ಎಲ್ಲರ ಮುಂದೆ ಬೆತ್ತಲಾಗಿದೆ. ಸರಿಯಾದ ಸಮಯದಲ್ಲಿ ಭಾರತದಲ್ಲಿ ಮೀಸಲಾತಿ ತರವುದು ಅಂದರೆ ಅಧಿಕಾರಕ್ಕೆ ಬಂದಾಗ ಮೀಸಲಾತಿ ರದ್ದು ಮಾಡುವ ಬಗ್ಗೆ ಎಲ್ಲಾ ಚಿಂತನೆ ಕಾಂಗ್ರೆಸ್ ನಡೆಸಿದೆ. ಅದ್ದರಿಂದ ಈ ಹೇಳಿಕೆಯನ್ನು ಖಂಡಿಸಿ ಬಿಜೆಪಿ ರಾಜ್ಯದ ಮೂಲೆ ಮೂಲೆಗಳಲ್ಲಿ ಪ್ರತಿಭಟನೆ, ಜನಾಂದೋಲನ ರೂಪಿಸಲಿದೆ ಎಂದರು.

Leave a Reply

Your email address will not be published. Required fields are marked *

error: Content is protected !!