ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನಿಧನ

ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (84) ಅವರು ಗುರುವಾರ ನಿಧನರಾಗಿದ್ದಾರೆ.

ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆ ಡಿ.ಕೆಂಪಣ್ಣ ಅವರು ಬಸರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಶೇ.40 ಕಮಿಷನ್‌ ಆರೋಪ ಮಾಡಿ ಸುದ್ದಿಯಾಗಿದ್ದರು. ಬಳಿಕ ರಾಜ್ಯಾದ್ಯಂತ ಈ ವಿಚಾರ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಿತ್ತು.

Leave a Reply

Your email address will not be published. Required fields are marked *

error: Content is protected !!