ಬ್ರಹ್ಮಾವರ: ಖಾಯಂ ನ್ಯಾಯಾಲಯ ಮಂಜೂರಿಗೆ ಕಾನೂನು ಸಚಿವರಿಗೆ ಮನವಿ

ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್. ಕೆ. ಪಾಟೀಲ್ ರನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಭೇಟಿಯಾಗಿ ನ. 17 ಮತ್ತು 18ರಂದು ನಡೆಯಲಿರುವ ಉಡುಪಿ ನ್ಯಾಯಾಲಯ ಹಾಗೂ ವಕೀಲರ ಸಂಘದ ಶತಮಾನೋತ್ತರ ಬೆಳ್ಳಿಹಬ್ಬ (125ನೇ ವಾರ್ಷಿಕೋತ್ಸವ) ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸುವಂತೆ ಆಹ್ವಾನ ನೀಡಿದರು.

ಇದೇ ಸಂದರ್ಭದಲ್ಲಿ ಬ್ರಹ್ಮಾವರದ ಸಂಚಾರಿ ನ್ಯಾಯಾಲಯದಲ್ಲಿ ಅಗಾಧ ಸಂಖ್ಯೆಯಲ್ಲಿ ಪ್ರಕರಣಗಳು ಬಾಕಿ ಇರುವುದರಿಂದ ಆದಷ್ಟು ಶೀಘ್ರ ಬ್ರಹ್ಮಾವರಕ್ಕೆ ಖಾಯಂ ನ್ಯಾಯಾಲಯ ಮಂಜೂರು ಮಾಡುವ ಬಗ್ಗೆ ಸಚಿವರಲ್ಲಿ ಚರ್ಚಿಸಲಾಯಿತು.

ನಿಯೋಗದಲ್ಲಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಜಂಟಿ ಕಾರ್ಯದರ್ಶಿ ರವೀಂದ್ರ ಬೈಲೂರ್, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಆರೂರ್ ಸುಕೇಶ್ ಶೆಟ್ಟಿ, ಪ್ರಜ್ವಲ್ ಶೆಟ್ಟಿ ಹಾಗೂ ನ್ಯಾಯವಾದಿ ಶಶಿರಾಜ್ ಕೋಟ್ಯಾನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!