ಬೈಂದೂರು: ಈಜಲು ಹೋಗಿದ್ದ ವಿದ್ಯಾರ್ಥಿಗಳಿಬ್ಬರು ನೀರಲ್ಲಿ ಮುಳುಗಿ ಮೃತ್ಯು

Oplus_131072

ಬೈಂದೂರು: ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಮ್ರತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ.

ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿಯ ಶಾನು ಮೊಹಮದ್ ಶಫಾನ್ (13) ಮ್ರತಪಟ್ಟ ದುರ್ದೈವಿಗಳಾಗಿದ್ದಾರೆ. ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಇಬ್ಬರು ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸರಿಯಾಗಿ ಈಜಲು ಬಾರದ ಇವರು ಮಳೆಗೆಯೇ ಆಟವಾಡಲು ನೀರಿಗೆ ಇಳಿದಿದ್ದಾರೆ. ವ್ಯಾಪಕ ಮಳೆಯ ಕಾರಣ ಸ್ಥಳೀಯರು ಯಾರು ಇಲ್ಲದ ಕಾರಣ ಬಾಲಕರು ನೀರಿನಲ್ಲಿ ಮುಳುಗುತ್ತಿದ್ದಾಗಲು ಯಾರು ರಕ್ಷಣೆಗೆ ಇರಲಿಲ್ಲ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!