ಗಂಗೊಳ್ಳಿಯ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Oplus_131072

ಕುಂದಾಪುರ: ಗಂಗೊಳ್ಳಿ ಸ್ಥಳೀಯ ಜಾಮಿಯಾ ಮೊಹಲ್ಲಾ ಪೊಲೀಸ್ ಚೆಕ್ ಪೋಸ್ಟ್ ಎದುರಿನ ನಿವಾಸಿ ಬಷೀರ್ ಅಹ್ಮದ್ ಅವರ ಪುತ್ರ ಮುಬಾಶೀರ್ ಬಷೀರ್ (30) ಇಂದು ಸೌದಿ ಅರೇಬಿಯಾದಲ್ಲಿ ಹೃದಯಾಘಾತ ದಿಂದ ನಿಧನ ಹೊಂದಿದ್ದಾರೆ.

ಎರಡು ವರುಷಗಳ ಹಿಂದೆ ಮಹಾರಾಷ್ಟ್ರದ ಪೂನಾ ಮೂಲದ ಯುವತಿಯನ್ನು ವಿವಾಹವಾಗಿದ್ದ ಈತ, ಪತ್ನಿಯ ಜೊತೆ ಸೌದಿಯಲ್ಲಿ ಉದ್ಯೋಗದಲ್ಲಿದ್ದರು.

ಪ್ರಾಥಮಿಕ ಶಿಕ್ಷಣವನ್ನು ಕುಂದಾಪುರ ಹೆಚ್ ಎಂ ಎಂ ಶಾಲೆ, ಪ್ರೌಢ ಶಿಕ್ಷಣವನ್ನು ವಿ ಕೆ ಆರ್ ಆಂಗ್ಲ ಮಾಧ್ಯಮ ಶಾಲೆ, ಪಿ.ಯು ಶಿಕ್ಷಣವನ್ನು ಭಂಡರ್ಕಾರ್ಸ್ ಕಾಲೇಜು, ತದನಂತರ ಇಂಜಿನಿಯರಿಂಗ್ ಪದವಿಯನ್ನು ಭಟ್ಕಳದ ಅಂಜುಮನ್ ಕಾಲೇಜು ಹಾಗೂ ಚೆನ್ನೈಯ ಕಾಲೇಜಿನಲ್ಲಿ ಮಾಡಿದ್ದರು.

ಊರಿನಲ್ಲಿದ್ದಾಗ ಜನರ ಕಷ್ಟ ಸುಖದಲ್ಲಿ ಭಾಗಿಯಾಗುತ್ತಿದ್ದ ಇವರು 4 ವರುಷಗಳ ಹಿಂದೆ ತ್ರಾಸಿ ಮರವಂತೆ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಉಪ್ಪಿನಂಗಡಿ ಮೂಲದ ಬಾಲಕನ ಅಂತ್ಯಸಂಸ್ಕಾರದ ಕಾರ್ಯವನ್ನು, ವಿಧಿವಿಧಾನಗಳನ್ನು ಗಂಗೊಳ್ಳಿಯ ತನ್ನ ಮನೆಯಲ್ಲಿಯೇ ನೇರವೇರಿಸಲು ಅವಕಾಶ ಮಾಡಿ ಕೊಟ್ಟಿದ್ದಲ್ಲದೆ, ಗಾಯಾಳು ಒರ್ವರ ಆಸ್ಪತ್ರೆ ವೆಚ್ಚವನ್ನು ತಾನೇ ಭರಿಸಿದ್ದ. ಕಷ್ಟದಲ್ಲಿ ಇದ್ದಾಗ ಸಹಾಯ ಮಾಡುವುದಲ್ಲದೇ, ತುರ್ತು ಸಂದರ್ಭ ಹೆಗಲಿಗೆ ಹೆಗಲು ಕೊಡುತ್ತಿದ್ದರು. ಇವರು ಕೆಲ ಸಮಯದ ಹಿಂದೆ ಉದ್ಯೋಗಕ್ಕಾಗಿ ಸೌದಿ ತೆರಳಿದ್ದರು ಎಂದು ತಿಳಿದುಬಂದಿದೆ.

ಮೃತರು ಪತ್ನಿ, ತಾಯಿ, ತಂದೆ, ಹಾಗೂ ಓರ್ವ ಸಹೋದರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದು, ಅಂತ್ಯಕ್ರಿಯೆ ವಿಧಿವಿಧಾನಗಳ ಬಗ್ಗೆ ಸೌದಿ ದೇಶದ ಕಾನೂನೂ ಕ್ರಮಗಳ ನಂತರವೇ ತಿಳಿದು ಬರಲಿದೆ..

ಮಬಾಶೀರ್ ಮೃತ ಸುದ್ದಿ ತಿಳಿಯುತ್ತಿದ್ದಂತೆ ಗಂಗೊಳ್ಳಿಯ ಆತನ ಮನೆಗೆ ಆತನ ಕುಟುಂಬಸ್ಥರು, ಮಿತ್ರರು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಕಂಬನಿ ಮಿಡಿಯುತ್ತಿದ್ದರೆ.

Leave a Reply

Your email address will not be published. Required fields are marked *

error: Content is protected !!