ಸಿಎಂ ಸಿದ್ದರಾಮಯ್ಯರ ರಾಜೀನಾಮೆ ಕೇಳುವ ನೈತಿಕತೆ ನಿಮಗಿಲ್ಲ- ಕೆ. ಕೃಷ್ಣಮೂರ್ತಿ ಆಚಾರ್ಯ

ಕೃಷ್ಣಮೂರ್ತಿ ಆಚಾರ್ಯ

ಉಡುಪಿ ಸೆ.25(ಉಡುಪಿ ಟೈಮ್ಸ್ ವರದಿ):ನಿಮ್ಮ ಮನೆಯ ದೋಸೆ ತೂತು ಇದೆ. ಮೊದಲು ಅದನ್ನು ಸರಿ ಮಾಡಿಕೊಳ್ಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಬಿಜೆಪಿ ಜಿಲ್ಲಾಧ್ಯಕ್ಷರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ಕೇಳುವ ಮೊದಲು ಕಾರ್ಕಳದ ಥೀಮ್ ಪಾರ್ಕ್ ನಲ್ಲಿರುವ ಪರಶುರಾಮನ ಮೂರ್ತಿಯ ವಿಚಾರದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಆಗಿದ್ದನ್ನು ಸರಿಪಡಿಸಲಿ. ಥೀಮ್ ಕಾರ್ಕ್ ವಿಚಾರದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಕೂಡ ಛೀಮಾರಿ ಹಾಕಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರು ಮೊದಲು ಓಟ್ ಬ್ಯಾಂಕ್‌ಗಾಗಿ ಜನರಿಗೆ ಸುಳ್ಳು ಹೇಳಿದ್ದನ್ನು, ಧರ್ಮಕ್ಕೆ ದ್ರೋಹ ಮಾಡಿದ್ದನ್ನು ಸರಿಮಾಡಲಿ ಎಂದಿದ್ದಾರೆ. 

ಸಿಎಂ ಸಿದ್ದರಾಮಯ್ಯ ಅವರು ಜನರಿಂದ ಆಯ್ಕೆಯಾದವರು. ಬಡವರ ಪರವಾಗಿರುವ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ನೈತಿಕತೆ ಅವರಿಗಿಲ್ಲ. ನಿಮ್ಮ ಮನೆಯ ದೋಸೆ ತೂತು ಇದೆ ಮೊದಲು ಅದನ್ನು ಸರಿ ಮಾಡಿಕೊಳ್ಳಿ ಎಂದು ವ್ಯಂಗ್ಯವಾಡಿದ್ದರೆ.

Leave a Reply

Your email address will not be published. Required fields are marked *

error: Content is protected !!