ಕೋಟೇಶ್ವರ: ಟಿಪ್ಪರ್ ಡಿಕ್ಕಿ- ಬಿಎಸ್ಸಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

Oplus_131072

ಕುಂದಾಪುರ: ಕಾಲೇಜ್ ಮುಗಿಸಿ ಸ್ನೇಹಿತರೊಂದಿಗೆ ನಡೆದು ಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ಮಂಗಳವಾರ ನಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯನ್ನು ನಾಗೂರು ನಿವಾಸಿ ಪ್ರಸ್ತುತ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರೀ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ ಎಂದು ಗುರುತಿಸಲಾಗಿದೆ.

ಧನುಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಬರುತ್ತಿದ್ದ. ಅತೀ ವೇಗವಾಗಿ ಹಿಂದಿನಿಂದ ಬಂದ ಶ್ರೀಮಹಾಗಣಪತಿ ಪ್ರಸನ್ನ ಎಂಬ ಹೆಸರಿನ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ತೀರಾ ಬಲಬದಿಗೆ ಬಂದು ಧನುಷ್ ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಧನುಷ್ ಲಾರಿಯಡಿಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಕುಂದಾಪುರ ಸಂಚಾರೀ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!