‘ಸಿಎಂ ಸಿದ್ದರಾಮಯ್ಯ ರಾಜಿನಾಮೆ ಯಾಕೆ ಕೊಡಬೇಕು?’- ಜೆಡಿಎಸ್ ಶಾಸಕ ಜಿಟಿ ದೇವೇಗೌಡ

ಮೈಸೂರು, ಅ. 03: ಸಿಎಂ ಸಿದ್ದರಾಮಯ್ಯ ರಾಜಿನಾಮೆ ಯಾಕೆ ಕೊಡಬೇಕು?, ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರಾ, ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂದು ವಾದಿಸುತ್ತಾ ಹೋದರೆ ರಾಜ್ಯದಲ್ಲಿ ಎಲ್ಲ ರಾಜಕೀಯ ನಾಯಕರೂ ರಾಜೀನಾಮೆ ನೀಡಬೇಕಾದೀತು. ಹಾಗೆ ಮಾಡಲು ಸಾಧ್ಯವೇ ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಪ್ರಶ್ನಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತು ಹೇಳಿಕೆ ನೀಡಿದರು.ಈಗಾಗಲೇ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್​ ವಾಪಸ್​ ಕೊಟ್ಟಿದ್ದಾರಲ್ಲಾ? ಮುಡಾ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ ಎಲ್ಲದಕ್ಕೂ ಸಿಎಂ ಸಿದ್ದರಾಮಯ್ಯ ಕಾರಣ ಅಲ್ಲ. ಎಫ್​ಐಆರ್​ ದಾಖಲಾದ ತಕ್ಷಣ ರಾಜೀನಾಮೆ ಅಗತ್ಯವಿಲ್ಲ ಎಂದು ಜಿಟಿ ದೇವೇಗೌಡ ಹೇಳಿದರು.

Leave a Reply

Your email address will not be published. Required fields are marked *

error: Content is protected !!