ಉಡುಪಿ: ಕೆಥೊಲಿಕ್ ಸಭಾ ವತಿಯಿಂದ ನಿರ್ಮಲ ಪರಿಸರ ಅಭಿಯಾನ

ಉಡುಪಿ, ಅ.04: ನಮ್ಮ ಸುತ್ತಮುತ್ತಲಿನ ಸ್ವಚ್ಛತೆಯೊಂದಿಗೆ ಪರಿಸರದ ಸ್ವಚ್ಚತೆ ಪ್ರತಿಯೊಬ್ಬರ ಜವಾಬ್ದಾರಿಯಾಗ ಬೇಕು ಎಂದು ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷರಾದ ಸಂತೋಷ್ ಕರ್ನೆಲಿಯೋ ಹೇಳಿದ್ದಾರೆ.

ಕಥೊಲಿಕ್ ಸಭಾ ಉಡುಪಿ ಪ್ರದೇಶ ನೇತೃತ್ವದ ನಿರ್ಮಲ ಪರಿಸರ ಅಭಿಯಾನದಡಿಯಲ್ಲಿ ಧರ್ಮಪ್ರಾಂತದ ಎಲ್ಲಾ ೫೧ ಘಟಕಗಳಲ್ಲಿ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಚತಾ ಅಭಿಯಾನಕ್ಕೆ ಕಲ್ಯಾಣಪುರದಲ್ಲಿ ಚಾಲನೆ ನೀಡಿ ಮಾತನಾಡುತಿದ್ದರು.

ಸ್ಮರ್ಧಾತ್ಮಕ ಯುಗದಲ್ಲಿ ನಾವು ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದರೂ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳುವಲ್ಲಿ ಹಿಂದಿದ್ದೇವೆ. ಪರಿಸರ ಸ್ವಚ್ಛವಾಗಿ ಇರುವಂತೆ ಪ್ರತಿಯೊಬ್ಬರು ಎಚ್ಚರಿಕೆ ವಹಿಸುವ ಮೂಲಕ ಆರೋಗ್ಯಕರ ಪರಿಸರ ನಿರ್ಮಾ ಣಕ್ಕೆ ಆದ್ಯತೆ ನೀಡಬೇಕು. ಮೊದಲು ನಮ್ಮ ಮನೆ, ಕಚೇರಿ ಸುತ್ತ ಒಳ್ಳೆಯ ಪರಿಸರ ನಿರ್ಮಾಣವಾಗಲು ಪರಿಶ್ರಮ ಪಡ ಬೇಕು. ಆಗ ಮಾತ್ರ ಸ್ವಲ್ಪ ಮಟ್ಟಿಗೆ ಬದಲಾವಣೆ ಕಾಣಲು ಸಾಧ್ಯ ಎಂದರು.

ಕೇಂದ್ರ ಸಮಿತಿಯ ಸೂಚನೆ ಮೇರೆಗೆ ನಿರ್ಮಲ ಪರಿಸರ ನಮ್ಮ ಕರ್ತವ್ಯ ಅಭಿಯಾನವನ್ನು ಉಡುಪಿ ಧರ್ಮಪ್ರಾಂತದ ೫೧ ಕಥೊಲಿಕ್ ಸಭಾ ಘಟಕಗಳು ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಚರ್ಚ್ ಪರಿಸರ ಹಾಗೂ ಸಾರ್ವಜನಿಕ ಸ್ಥಳ ಗಳಲ್ಲಿ ಸ್ವಚ್ಚತಾ ಅಭಿಯಾನವನ್ನು ಕೈಗೊಂಡರು.

ಈ ವೇಳೆ ಆಯಾ ಚರ್ಚುಗಳ ಧರ್ಮಗುರುಗಳು, ಘಟಕಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!