ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ: ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Oplus_131072

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಆಲಿ(52) ನಾಪತ್ತೆಯಾಗಿದ್ದು, ಕುಳೂರಿನ ಸೇತುವೆ ಬಳಿ ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ತೀವ್ರ ಹುಡುಕಾಟ ಪ್ರಾರಂಭಿಸಿದ್ದಾರೆ.

ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿದ್ದು ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ.

ನದಿಯಲ್ಲಿ ಎಸ್ ಡಿ ಆರ್ ಎಫ್,ಎನ್ ಡಿ ಆರ್ ಎಫ್, ಅಗ್ನಿಶಾಮಕದಳದಿಂದ ಹುಡುಕಾಟ ನಡೆಸುತ್ತಿದೆ.

ಬೆಳಗ್ಗೆ ಮೂರು ಗಂಟೆಗೆ ಮನೆಯಿಂದ ಹೊರಟ್ಟಿದ್ದ ಮುಮ್ತಾಜ್ ಆಲಿ ನಾಪತ್ತೆಯಾಗಿದ್ದು ಬೆಳಗ್ಗೆ 5 ಗಂಟೆಗೆ ಕುಳೂರು ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿದೆ.

ಅಪಘಾತ ಸ್ಥಿತಿಯಲ್ಲಿ ಮುಮ್ತಾಜ್ ಅವರ ಬಿಎಂಡಬ್ಲೂ ಕಾರು ಪತ್ತೆಯಾಗಿದೆ. ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ಅವರು ತೊಡಗಿಸಿಕೊಂಡಿದ್ದರು.

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು ಕಮೀಷನರ್ ಮುಂದೆ ಮೊಯಿದ್ದೀನ್ ಬಾವ ಕಣ್ಣೀರು ಹಾಕಿದ್ದಾರೆ.

ತೀವ್ರ ಹುಡುಕಾಟ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!