ಮುಮ್ತಾಝ್ ಅಲಿ ನಿಧನಕ್ಕೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರ.ಕಾರ್ಯದರ್ಶಿ ಶೇಖ್ ವಾಹಿದ್ ಗಾಢ ಸಂತಾಪ

Oplus_131072

ಉಡುಪಿ: ಮಂಗಳೂರಿನ ಪ್ರಖ್ಯಾತ ಉದ್ಯಮಿ, ಕೊಡುಗೈ ದಾನಿ ಮುಮ್ತಾಝ್ ಅಲಿ ಅವರ ನಿಧನಕ್ಕೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಶೇಖ್ ವಾಹಿದ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

ಮುಮ್ತಾಝ್ ಅಲಿ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳ ಮೂಲಕ ಸಮಾಜ‌ಕ್ಕಾಗಿ ಕೆಲಸ ಮಾಡುತ್ತಿದ್ದ ಮುಮ್ತಾಝ್ ಅಲಿ ಅವರ ಅಗಲಿಕೆಗೆ ದು:ಖವಾಗಿದೆ, ನಮ್ಮ ಸಮುದಾಯ ಮಾತ್ರವಲ್ಲದೆ ಯಾವುದೇ ಜಾತಿ ಭೇದವಿಲ್ಲದೆ ಸಮಾಜ ಮುಖಿ ಕಾರ್ಯಕ್ರಮಗಳಿಗೆ ತನುಮನದಿಂದ ಸಹಕಾರ ನೀಡತ್ತಾ ಬಂದಿರುವ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ.

ದೇವರು ಮೃತರ ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ವಾಹಿದ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!