ಕೊಡಗು, ಚಿಕ್ಕಮಗಳೂರು ಸಹಿತ ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು: ಕೊಡಗು, ಚಿಕ್ಕಮಗಳೂರು ಸೇರಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ(ಅ.10 ವರೆಗೆ) ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಹಾಸನ, ಚಿಕ್ಕಮಗಳೂರು,ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯನಗರದಲ್ಲಿ ಮಳೆಯಾಗಲಿದೆ.

ಪುತ್ತೂರು, ನಾಪೋಕ್ಲು, ಉಪ್ಪಿನಂಗಡಿ, ಪಣಂಬೂರು, ಮಾಣಿ, ಕೃಷ್ಣರಾಜಪೇಟೆ, ಕನಕಪುರ, ತಿಪಟೂರು, ಹಿರೇಕೆರೂರು, ಆಗುಂಬೆ, ಕಳಸ, ಮೂಡಿಗೆರೆ, ಕೊಟ್ಟಿಗೆಹಾರ, ಕೊಪ್ಪ, ಬೇಲೂರು, ಬೆಳ್ಳೂರು, ಭದ್ರಾವತಿ, ಗೇರುಸೊಪ್ಪ, ಬನವಾಸಿ, ಬೆಳ್ತಂಗಡಿ, ಧರ್ಮಸ್ಥಳ, ಕದ್ರಾ, ಗುತ್ತಲ್, ಹಿಡಕಲ್, ಚನ್ನರಾಯಪಟ್ಟಣ, ಎಚ್​ಡಿ ಕೋಟೆ, ಕುಶಾಲನಗರ, ಕುಣಿಗಲ್, ತ್ಯಾಗರ್ತಿ, ಗುಂಡ್ಲುಪೇಟೆಯಲ್ಲಿ ಮಳೆಯಾಗಿದೆ.

Leave a Reply

Your email address will not be published. Required fields are marked *

error: Content is protected !!