ಕೋಟ ಪಂಚವರ್ಣದ ರೈತರೆಡೆಗೆ 40 ಮಾಲಿಕೆ- ಚಂದ್ರಶೇಖರ್ ಗಾಣಿಗರಿಗೆ ರೈತ ಪ್ರಶಸ್ತಿ

ಕೋಟ: ರೈತ ಕಾಯಕವೇ ಕ್ಲಿಷ್ಟಕರವಾದದ್ದು ಅದರಲ್ಲಿ ಅಳಿದುಳಿದ ರೈತರು ರೈತಕಾಯಕದಲ್ಲಿ ನಿರತರಾಗಿದ್ದಾರೆ ಆದರೆ ಬೆಳೆದ ಬೆಳೆಗಳ ಲಾಭ ಮಧ್ಯವರ್ತಿಗಳಿಗಾಗುತ್ತಿದೆ ಈ ದಿಸೆಯಲ್ಲಿ ಪ್ರಸ್ತುತ ಭತ್ತದ ಬೆಳೆಗೆ ನೈಜ ಬೆಲೆ ಸಿಗದಿದ್ದರೆ ರೈತ ಸಮುದಾಯ ಹೋರಾಟಕ್ಕೆ ಧುಮುಕಲಿದೆ ಎಂದು ಕೋಟದ ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ ಹೇಳಿದರು.

ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ,ವಿಪ್ರ ಮಹಿಳಾ ವಲಯ ಸಾಲಿಗ್ರಾಮ, ಜೆಸಿಐ ಸಿನಿಯರ್ ಲಿಜನ್ ಇವರುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 40ನೇ ಮಾಲಿಕೆಯಲ್ಲಿ ಮಾತನಾಡಿ ರೈತರ ಭವಣೆ ಆಲಿಸದ ಕಾಲಘಟ್ಟದಲ್ಲಿ ರೈತರ ಮನೆಯಂಗ ಳಕ್ಕೆ ತೆರಳಿ ಗೌರವಿಸುವ ಪಂಚವರ್ಣದ ಕಾರ್ಯ ನಿಜಕ್ಕೂ ಶ್ಲಾಘನೀಯ, ಸರಕಾರ ಜಿಲ್ಲಾಡಳಿತ ಮಾಡಬೇಕಾದ ಕಾರ್ಯ ಸಂಘಸಂಸ್ಥೆಗಳಿಂದಾಗುತ್ತಿದೆ ಇಂಥಹ ಕಾರ್ಯಕ್ರಮಗಳ ಮೂಲಕ ರೈತರ ಕಣ್ಣಿರೊರೆಸುವ ಕೆಲಸ ನಿರಂತರವಾಗಿ ನಡೆಯಲಿ ಅಲ್ಲದೆ ಪ್ರಸ್ತುತ ಕಟಾವಿಗೆ ಬಂದ ಭತ್ತಕ್ಕೆ ನೈಜ ಬೆಲೆ ಶೀಘ್ರದಲ್ಲೇ ಆಗಬೇಕು ಎಂದು ಆಗ್ರಹಿಸಿ, ಚಂದ್ರಶೇಖರ್ ಗಾಣಿಗರ ರೈತ ಕಾಯಕ ಅವರನ್ನುಗುರುತಿಸಿದ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು.

ಇದೇ ಮಾತನಾಡಿದ ಕುಂದಾಪುರ ನ್ಯಾಯಾಲಯದ ನ್ಯಾಯವಾದಿ ಕೋಟತಟ್ಟು ಪ್ರಮೋದ್ ಹಂದೆ ಮಾತನಾಡಿ ಪ್ರಸ್ತುತ ದಿನಗಳಲ್ಲಿ ನಾವುಗಳು ಕೃಷಿ ಭೂಮಿಗೆ ವಿಷಕಾರಕ ವಸ್ತುಗಳನ್ನು ಅತಿಯಾಗಿ ಬಳಸುತ್ತಿದ್ದೇವೆ ಇದು ಮನುಷ್ಯನ ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬಿರುತ್ತಿದೆ ಇದಕ್ಕೆ ರೈತ ಸಮುದಾಯ ಕಡಿವಾಣ ಹಾಕಬೇಕು ಅತಿಯಾಗಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ವಿಜೃಂಭಿಸುತ್ತಿದೆ ಇದು ಭೂಮಿಯ ಫಲವತ್ತತೆಯನ್ನು ಹಾಳುಗೆಡುವುತ್ತಿದೆ ಹೊಳೆ ತೊರೆಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ಕೊಂಪೆಯಾಗಿದೆ ಈ ದಿಸೆಯಲ್ಲಿ ಮನುಕುಲ ಜಾಗೃತರಾಗುವುದು ಒಳಿತು ಎಂದರು.

ಇದೇ ವೇಳೆ ಕಾಯಕ ಜೀವಿ ಕೋಟತಟ್ಟು ಚೆಚ್ಕೆರೆ ಚಂದ್ರಶೇಖರ್ ಗಾಣಿಗ ಇವರನ್ನು ಕೃಷಿ ಪರಿಕರಗಳೊಂದಿಗೆ ಗೌರವಿಸಲಾಯಿತು.
ಪ್ರಾರಂಭದಲ್ಲಿ ಗೋವಿಗೆ ವಿಶೇಷ ಪೂಜೆ ಸಲ್ಲಿಸಿದ ರೈತ ದಂಪತಿಗಳು,ಗಿಡ ನೆಟ್ಟು ಪರಿಸರ ಜಾಗೃತಿ ಮೊಳಗಿಸಿದರು. ವಿಶೇಷವಾಗಿ ಕಂಬಳದ ಕೋಣಗಳು,ಕೃಷಿ ವಿವಿಧ ಪರಿಕರಗಳ ಪ್ರದರ್ಶನ ಗಮನ ಸೆಳೆಯಿತು. ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಉಡುಪಿ ಜಿಲ್ಲಾ ಸಂಯೋಜಕ ರವೀಂದ್ರ ಮೊಗವೀರ ವಿಮಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಅಭ್ಯಾಗತರಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ಸಿಇಓ ಶರತ್ ಕುಮಾರ್ ಶೆಟ್ಟಿ, ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯ ವಾಸು ಪೂಜಾರಿ, ಗ್ರಾಮದ ಹಿರಿಯರಾದ ವೈಕುಂಠ ಹಂದೆ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಜೆಸಿಐ ಸಿನಿಯರ್ ಲಿಜನ್ ಕೋಟ ಅಧ್ಯಕ್ಷ ಕೇಶವ ಆಚಾರ್ ಕೋಟ,ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣ ಸಂಸ್ಥೆಯ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು. ಜತೆಕಾರ್ಯದರ್ಶಿ ಶಕೀಲ ಎನ್ ಪೂಜಾರಿ ಸನ್ಮಾನ ಪತ್ರವಾಚಿಸಿದರು. ಕಾರ್ಯಕ್ರಮವನ್ನು ಪಂಚವರ್ಣದ ಸದಸ್ಯ ಸಂತೋಷ್ ಕುಮಾರ್ ಕೋಟ ನಿರೂಪಿಸಿದರು. ಸಾಂಸ್ಕöÈತಿಕ ಕಾರ್ಯದರ್ಶಿ ಶಶಿಧರ ತಿಂಗಳಾಯ ವಂದಿಸಿದರು. ಕಾರ್ಯಕ್ರಮವನ್ನು ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.

ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ನೇತೃತ್ವದಲ್ಲಿ ರೈತರೆಡೆಗೆ ನಮ್ಮ ನಡಿಗೆ 40ನೇ ಮಾಲಿಕೆಯಲ್ಲಿ ಕಾಯಕ ಜೀವಿ ಕೋಟತಟ್ಟು ಚೆಚ್ಕೆರೆ ಚಂದ್ರಶೇಖರ್ ಗಾಣಿಗ ಇವರನ್ನು ಕೃಷಿ ಪರಿಕರಗಳೊಂ ದಿಗೆ ಗೌರವಿಸಲಾಯಿತು. ಕೋಟದ ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಕುಂದಾಪುರ ನ್ಯಾಯಾಲಯದ ನ್ಯಾಯವಾದಿ ಕೋಟತಟ್ಟು ಪ್ರಮೋದ್ ಹಂದೆ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!