ಮೊಬೈಲ್ ಇಂಟರ್ ನೆಟ್ ಡಾಟಾ ಖಾಲಿ ಮಾಡಿದ ತಮ್ಮನ ಇರಿದು ಕೊಂದ ಅಣ್ಣ!

ಜೋಧ್ ಪುರ: ಮೊಬೈಲ್ ಇಂಟರ್ ನೆಟ್ ಡಾಟಾ ಖಾಲಿ ಮಾಡಿದ ಎಂದು ಆಕ್ರೋಶಗೊಂಡ ವ್ಯಕ್ತಿಯೋರ್ವ ಸ್ವಂತ ತಮ್ಮನನ್ನೇ ಇರಿದುಕೊಂದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನದ ರಾಜಧಾನಿ ಜೋಧ್ ಪುರದಲ್ಲಿ ಈ ಘಟನೆ ನಡೆದಿದ್ದು, ಕೊಲೆಗೀಡಾದ ಯುವಕನನ್ನು 23 ವರ್ಷದ ರಾಯ್ ಎಂದು ಗುರುತಿಸಲಾಗಿದ್ದು, ಆತನ ಅಣ್ಣ ರಾಮನ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಇದೇ ಬುಧವಾರ ಸಂಜೆ ರಾಮನ್ ತನ್ನ ಕಿರಿಯ ಸಹೋದರ ರಾಯ್ ನನ್ನು ಮನೆಯ ಟೆರೆಸ್ ಮೇಲೆ ಕರೆದೊಯ್ದು ಮೊಬೈಲ್ ಡಾಟಾ ಖಾಲಿ ಮಾಡಿದ್ದಕ್ಕಾಗಿ ಬೈಯ್ಯತೊಡಗಿದ್ದ. ಈ ವೇಳೆ ಕ್ರೋಧದಿಂದ ಹರಿತವಾದ ಆಯುಧದಿಂದ ರಾಯ್ ನ ಎದೆಗೆ 4 ರಿಂದ 5 ಬಾರಿ ಇರಿದಿದ್ದಾನೆ. ತೀವ್ರ  ರಕ್ತಸ್ರಾವದಿಂದ ರಾಯ್ ನೆಲಕ್ಕುರುಳಿದ್ದು, ಈ ವೇಳೆ ರಾಮನ್ ಸ್ಥಳದಿಂದ ಪರಾರಿಯಾಗಿದ್ದಾನೆ.

ವಿಚಾರ ತಿಳಿದ ಪೋಷಕರು ಟೆರೆಸ್ ಮೇಲೆ ತೆರಳಿದಾಗ ರಾಯ್ ರಕ್ತದ ಮಡುವಿನಲ್ಲಿ ಬಿದ್ದಿದ್ದ, ಕೂಡಲೇ ಆತನನ್ನು ಆಸ್ಪತ್ರೆ ದಾಖಲಿಸಲಾಯಿತಾದರೂ, ಮಾರ್ಗಮಧ್ಯೆಯೇ ಆತ ಸಾವನ್ನಪ್ಪಿದ್ದಾನೆ, ವಿಚಾರ ತಿಳಿದ ಪೊಲೀಸರು ರಾಮನ್ ನನ್ನು ಸ್ಥಳೀಯ ರೈಲ್ವೇ ನಿಲ್ದಾಣದಲ್ಲಿ ಬಂಧಿಸಿದ್ದಾರೆ.  ಮೂಲಗಳ ಪ್ರಕಾರ ರಾಮನ್ ಮಾನಸಿಕ ಅಸ್ವಸ್ಥನಾಗಿದ್ದ. ಇದಕ್ಕಾಗಿ ಚಿಕಿತ್ಸೆ ಕೂಡ ಪಡೆಯುತ್ತಿದ್ದ ಪೋಷಕರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!