ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಊಹಾಪೋಹ: ಡಿಸಿಎಂ ಅಶ್ವತ್ಥನಾರಾಯಣ್

ಮುಖ್ಯಮ0ತ್ರಿ ಬದಲಾವಣೆ ವಿಚಾರ ಕೇವಲ ಊಹಾಪೋಹ. ಉಳಿದ ಅವಧಿಗೂ ಬಿಎಸ್‌ವೈ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಡಿಸಿಎಂ ಅಶ್ವತ್ಥನಾರಾಯಣ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು,  ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಬಗ್ಗೆ ಮುಖ್ಯಮಂತ್ರಿ ಅವರ ತೀರ್ಮಾನವೇ ಅಂತಿಮವಾಗಿದ್ದು,ಅವಧಿ ಮುಗಿಯುವವರೆಗೂ ಬಿಎಸ್‌ವೈ ಅವರೇ ಮುಖ್ಯ ಮಂತ್ರಿಗಳಾಗಿ ಮುಂದುವರಿಯಲಿದ್ದಾರೆ ಎಂದರು.
ಇನ್ನು ರಾಜ್ಯದಲ್ಲಿ ರಾಜಕಾರಣಿಗಳ ನಿವಾಸ, ಕಚೇರಿ ಮೇಲಾಗುತ್ತಿರುವ ಸಿಬಿಐ ದಾಳಿ ಕುರಿತು ಪ್ರತಿಕ್ರಿಯಿಸಿರುವ ಅವರು, ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು.

ನಾವು ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಅಸ್ತ್ರ ಬಳಸುತ್ತಿಲ್ಲ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುವವರು ಎಂದು ಡಿಸಿಎಂ ಅಶ್ವತ್ಥನಾರಾಯಣ್ ತಿರುಗೇಟು ನೀಡಿದ್ದಾರೆ. ರೋಷನ್ ಬೇಗ್ ಅವರ ಮೇಲೂ ಸಿಬಿಐ ಅಧಿಕಾರಿಗಳು ಕಾನೂನು ಪ್ರಕಾರ ದಾಳಿ ನಡೆಸಿದ್ದಾರೆ. ಅದರ ವಿಚಾರಣೆಯೂ ನ್ಯಾಯ ಸಮ್ಮತವಾಗಿ ನಡೆಯಲಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ, ಸಚಿವ ರಮೇಶ್ ಜಾರಕಿಹೊಳಿ ಕಿಂಗ್ ಮೇಕರ್ ಅಲ್ಲ. ಅವರು ಉತ್ಸಾಹದಿಂದ ಕೆಲಸ ಮಾಡುತ್ತಾರೆ. ತನ್ನ ಸಹೋದ್ಯೋಗಿಗಳು ಹಾಗೂ ಪಕ್ಷದ ಮುಖಂಡರೊoದಿಗೆ ಉತ್ತಮ ಬಾಂಧವ್ಯ ಹೊಂದಿರುವುದರಿ0ದ ಕಿಂಗ್ ಮೇಕರ್ ಎಂದು ಕೆಲವರು ತಿಳಿದುಕೊಂಡಿದ್ದಾರಷ್ಟೆ ಎಂದು ಡಿಸಿಎಂ ಅಶ್ವತ್ಥನಾರಾಯಣ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!