ಶಾಸಕ ಗಂಟಿಹೊಳೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ!

ಹೊಸನಗರ: ಜಾನುವಾರು ಅಡ್ಡ ಬಂದ ಪರಿಣಾಮ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಸೇರಿ ಮೂರು ಕಾರುಗಳು ಶುಕ್ರವಾರ ಸಂಜೆ ಕೋಡೂರು ಬಳಿ ಅಪಘಾತಕ್ಕೀಡಾದ ಘಟನೆ ಸಂಭವಿಸಿದೆ.

ಸರಣಿ ಅಪಘಾತದಲ್ಲಿ ಶಾಸಕರ ಕಾರು ಸೇರಿದಂತೆ 3 ಕಾರುಗಳು ಸ್ವಲ್ಪ ಮಟ್ಟಿಗೆ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭಿಸಿದೆ.

ರಿಪ್ಪನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕ ಗುರುರಾಜ್ ಗಂಟಿಹೊಳೆ ಬೈಂದೂರು ಕಡೆ ಪ್ರಯಾಣ ಬೆಳಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

Leave a Reply

Your email address will not be published. Required fields are marked *

error: Content is protected !!