ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಯತ್ನ- ಪ್ರಕರಣದಲ್ಲಿ ಬಿಗ್ ಟ್ವಿಸ್ಟ್

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್ ಅವರು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವೇಳೆ ಮಾತನಾಡಿದ ಅವರು, ನಾನು ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ, ಕಳೆದ ಮೂರು ದಿನದ ಹಿಂದೆ ಮದುವೆ ಕಾರ್ಯಕ್ರಮದಲ್ಲಿ ಊಟದ ಮಾಡಿದ ಪರಿಣಾಮ ಅಜೀರ್ಣವಾಗಿತ್ತು.

ಈ ಹಿನ್ನೆಲೆಯಲ್ಲಿ ಬೇರೆ ಮಾತ್ರೆ ತಗೊಂಡ ಕಾರಣ  ಈ ರೀತಿಯಾಗಿದೆ ಎಂದು ಹೇಳಿದ್ದಾರೆ. ರಾಜಕೀಯ ಒತ್ತಡ ಯಾವ ಕಾಲಕ್ಕೂ ಇದ್ದೇ ಇರುತ್ತೆ, ಆದರೆ ಮಾತ್ರೆ ತಗೋಳ್ಳೋ ಸ್ವಭಾವ ನನ್ನದಲ್ಲ. ನಿದ್ರೆ ಬರದೆ ಇದ್ದಾಗ ಮಾತ್ರೆ ತಗೊಳ್ಳುತ್ತಿದೆ. ಆದರೆ ಬೇರೆ ಮಾತ್ರೆ ತಗೊಂಡ ಪರಿಣಾಮ ಈ ರೀತಿಯಾಗಿದೆಯಷ್ಟೆ ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!