ಭಾರತ್ ಬಂದ್ ಯಶಸ್ವಿಯಾಗಲ್ಲ: ಸಿಎಂ ಬಿಎಸ್ ವೈ

ಬೆಂಗಳೂರು: ಭಾರತ್ ಬಂದ್ ರಾಜಕೀಯ ಪ್ರೇರಿತವಾಗಿದ್ದು ಇದು ಯಶಸ್ವಿಯಾಗುವುದಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಅವರು ಇಂದು ಕೇಂದ್ರ ಸರ್ಕಾರದ ಕೃಷಿ ಮಸೂದೆ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಕುರಿತು ಪ್ರತಿಕ್ರಿಯಿಸಿ, ರಾಜಕೀಯ ಉದ್ದೇಶಕ್ಕಾಗಿ ಬಂದ್‌ಗೆ ಕರೆ ಕೊಡೋದು ಸರಿಯಲ್ಲ. ನಮ್ಮದು ರೈತರ ಪರವಾಗಿರುವ ಸರ್ಕಾರ, ರೈತರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.

ರೈತರಿಗೆ ಧಕ್ಕೆ ಆಗುವ ಕೆಲಸ ಪ್ರಧಾನಿ ಮೋದಿಯವರು ಎಂದೂ ಮಾಡಿಲ್ಲ. ಹಾಗಾಗಿ ಅನಗತ್ಯ ಬಂದ್ ಮಾಡುವ ಬದಲು ವಾಸ್ತವ ಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಸಾರ್ವಜನಿಕರು ಬಂದ್‌ಗೆ ಬೆಂಬಲ ನೀಡದೆ ಎಂದಿನಂತೆ ಜನಜೀವನ ನಡೆಸಬೇಕು. ಯಾವುದೇ ರೀತಿ ಬಂದ್‌ಗೆ ಒತ್ತಾಯ ಅಥವಾ ಅಹಿತಕರ ಘಟನೆಗಳು ನಡೆದರೆ ಆ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!