ಮುಂಬೈ ತೆರಳುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ- ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!

Dibrugarh: An Air India special flight before taking off for Chennai from Mohanbari Airport, during the ongoing nationwide COVID-19 lockdown, in Dibrugarh, Saturday, May 23, 2020. (PTI Photo)(PTI23-05-2020_000203B)

ನವದೆಹಲಿ: ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.

ದೆಹಲಿಯಿಂದ ಮುಂಬೈಗೆ ಹಾರಾಟ ಶುರು ಮಾಡಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ವಾಪಸ್ ಲ್ಯಾಂಡ್ ಆಗಿದೆ.

ಎಂಜಿನ್ ನಲ್ಲಿ ತಾಂತ್ರಿಕ ದೋಷ ಪತ್ತೆ ಮಾಡಿದ ಪೈಲಟ್, ತಕ್ಷಣ ನಿರ್ಧಾರ ತೆಗೆದುಕೊಂಡಿದ್ದಾರೆ. ಸುರಕ್ಷತೆಗೆ ಆದ್ಯತೆ ನೀಡಿ ಏರ್ ಟರ್ನ್ಅರೌಂಡ್ ಮಾಡಲು ನಿರ್ಧರಿಸಿದ್ದಾರೆ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಏರ್ ಇಂಡಿಯಾ ವಿಮಾನ AI-887 ನಲ್ಲಿ ಈ ಘಟನೆ ನಟೆದಿದೆ. ವಿಮಾನವನ್ನು ಬೋಯಿಂಗ್ 777-300ER (VT-ALS) ನೊಂದಿಗೆ ನಿರ್ವಹಿಸಲಾಗಿತ್ತು.

ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ, ವಿಮಾನದ ಫ್ಲಾಪ್ಗಳನ್ನು ಹಿಂತೆಗೆದುಕೊಳ್ಳುತ್ತಿದ್ದಾಗ, ವಿಮಾನ ಸಿಬ್ಬಂದಿಗೆ ಬಲ ಎಂಜಿನ್ನಲ್ಲಿ ಕಡಿಮೆ ತೈಲ ಒತ್ತಡದ ಎಚ್ಚರಿಕೆ ದೊರೆತಿದೆ. ಕೆಲ ಕ್ಷಣದಲ್ಲೇ, ಎಂಜಿನ್ ತೈಲ ಒತ್ತಡ ಸಂಪೂರ್ಣವಾಗಿ ಶೂನ್ಯಕ್ಕೆ ಇಳಿದಿದೆ. ಇದು ತಾಂತ್ರಿಕ ಅಪಾಯವನ್ನು ಸೃಷ್ಟಿಸಿದೆ.

ಈ ಹಿನ್ನೆಲೆಯಲ್ಲಿ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿ, ಪೈಲಟ್ಗಳು ತಕ್ಷಣವೇ ಏರ್ ಟರ್ನ್ಅರೌಂಡ್ ಮಾಡಲು ನಿರ್ಧರಿಸಿದ್ದಾರೆ. ವಿಮಾನವನ್ನು ಎಚ್ಚರಿಕೆಯಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಹಿಂತಿರುಗಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!