ಬ್ರಹ್ಮಾವರ: ಗ್ರಾ.ಪಂ. ಮಾಜಿ ಅಧ್ಯಕ್ಷ ಸಹಿತ 12 ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ

ಬ್ರಹ್ಮಾವರ: (ಉಡುಪಿ ಟೈಮ್ಸ್ ವರದಿ)ವಾರಂಬಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಸೇರಿದಂತೆ ಇಲ್ಲಿನ 12 ಮಂದಿ ಕಾಂಗ್ರೆಸ್ ಪ್ರತಿನಿಧಿಗಳು ಕೈ ತೊರೆದು ಇಂದು ಕಮಲ ಪಾಳಯಕ್ಕೆ ಸೇರ್ಪಡೆಗೊಂಡಿದ್ದಾರೆ. ಶಾಸಕ ಕೆ. ರಘುಪತಿ ಭಟ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್‌ನ ಮುಖಂಡರನ್ನು ಬಿಜೆಪಿಗೆ ಬರಮಾಡಿಕೊಂಡರು.

ಈ ವೇಳೆ ವಾರಂಬಳ್ಳಿ ಗ್ರಾಮ ಪಂಚಾಯತ್‌ನಲ್ಲಿ 2 ಬಾರಿ ಕಾಂಗ್ರೆಸ್ ನಿಂದ ಸದಸ್ಯರಾಗಿ, ಅಧ್ಯಕ್ಷರಾಗಿದ್ದ ನಿತ್ಯಾನಂದ ಬಿ.ಆರ್., ವಾರಂಬಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಕಾಂಗ್ರೆಸ್ ಎಸ್.ಸಿ. ಮೋರ್ಚಾ ಅಧ್ಯಕ್ಷ ಎಸ್. ನಾರಾಯಣ್, ವಾರಂಬಳ್ಳಿ ಪಂಚಾಯತ್‌ನಲ್ಲಿ ಕಾಂಗ್ರೆಸ್ ನಿಂದ 5 ಬಾರಿ ಸದಸ್ಯರಾಗಿ, ಪಂಚಾಯತ್ ಅಧ್ಯಕ್ಷರಾಗಿದ್ದ ನವೀನ್ ಚಂದ್ರ ನಾಯಕ್ ಸೇರಿದಂತೆ ವಾರಂಬಳ್ಳಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಮಾಜಿ ಸದಸ್ಯರುಗಳಾದ ರಾಜು ಸಾಲ್ಯಾನ್, ದೇವಾನಂದ, ಕ್ರಿಸ್ತೀನ್, ಗೋಪಾಲ ದೇವಾಡಿಗ, ಕವಿತಾ, ಹೇಮಾ ಶೆಟ್ಟಿಗಾರ್, ಸದಾನಂದ ಪೂಜಾರಿ, ಗುಲಾಬಿ ಕುಂದರ್ ಮತ್ತು ಸುರೇಶ್ ಬಿರ್ತಿ ಸೇರಿದಂತೆ ಒಟ್ಟು 12 ಮಂದಿ ಕಾಂಗ್ರೆಸ್ ಜನ ಪ್ರತಿನಿಧಿಗಳು ಬಿಜೆಪಿಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ಪ್ರಧಾನ ಕಾರ್ಯದರ್ಶಿ ಅಶೋಕ್ ಹೇರೂರು, ವಾರಂಬಳ್ಳಿ ಗ್ರಾಮ ಪಂಚಾಯತ್ ಚುನಾವಣಾ ಉಸ್ತುವಾರಿ ಸುಧೀರ್ ಶೆಟ್ಟಿ, ಪಕ್ಷದ ಮುಖಂಡರಾದ ನಿಶಾನ್ ರೈ, ಬಿರ್ತಿ ರಾಜೇಶ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ಕುಸುಮ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಉಮೇಶ್ ನಾಯ್ಕ್, ಜಿಲ್ಲಾ ಕಾರ್ಯಕಾರಣಿ ಸದಸ್ಯರಾದ ನಾಗವೇಣಿ, ಬ್ರಹ್ಮಾವರ ಮಹಾಶಕ್ತಿ ಕೇಂದ್ರದ ಸದಸ್ಯರಾದ ಉಲ್ಲಾಸ್ ವಾರಂಬಳ್ಳಿ,  ಹರೀಶ್ ಶೆಟ್ಟಿ ಚೇರ್ಕಾಡಿ ಹಾಗೂ ಪಕ್ಷದ ಹಿರಿಯರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!