ಕುಂದಾಪುರ: ಕಾರು ಸೇತುವೆಗೆ ಢಿಕ್ಕಿ – ಕೆಎಂಎಫ್ ನಿರ್ದೇಶಕ, ಬಿಜೆಪಿ ಮುಖಂಡ ಮೃತ್ಯು

ಕುಂದಾಪುರ, ಡಿ.9: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕ, ಬಿಜೆಪಿ ಮುಖಂಡ ಮೃತಪಟ್ಟ ಘಟನೆ ಬುಧವಾರ ಮಧ್ಯಾಹ್ನ ಹಾಲಾಡಿಯಲ್ಲಿ ನಡೆದಿದೆ.

ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತಪಟ್ಟವರಾಗಿದ್ದಾರೆ.

ಶಂಕರನಾರಾಯಣದಲ್ಲಿ ಕಾರ್ಯಕ್ರಮ ಮುಗಿಸಿ ಹಾಲಾಡಿಗೆ ಬರುತ್ತಿರುವ ಸಂದರ್ಭ
ಹಾಲಾಡಿಯಲ್ಲಿ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹದ್ದೂರು ರಾಜೀವ ಶೆಟ್ಟಿ 
ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರುವ ವೇಳೆ ದಾರಿ ಮಧ್ಯೆ ಮೃತರಾಗಿದ್ದಾರೆ.
ಪ್ರಸ್ತುತ ಕೆಎಂಎಫ್ ನ ನಿರ್ದೇಶಕರಾಗಿರುವ ಹದ್ದೂರು ರಾಜೀವ ಶೆಟ್ಟಿ
ಶಂಕರನಾರಾಯಣ ತಾಲೂಕು ಪಂಚಾಯತ್ ನ ಸದಸ್ಯರಾಗಿದ್ದವರು.
ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Leave a Reply

Your email address will not be published. Required fields are marked *

error: Content is protected !!