ಉಡುಪಿ: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಕಸಿದು ಪರಾರಿ

ಉಡುಪಿ:(ಉಡುಪಿ ಟೈಮ್ಸ್ ವರದಿ)ನಡೆದುಕೊಂಡು ಹೋಗುತ್ತಿದ್ದ ವೇಳೆ ದಾರಿ ಕೇಳುವ ನೆಪದಲ್ಲಿ ಬಂದ ಇಬ್ಬರು ಕಳ್ಳರು ಮೊಬೈಲ್ ಕಸಿದು ಪರಾರಿಯಾದ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ ಕಿನ್ನಿಮೂಲ್ಕಿಯ ಕನ್ನರ್ಪಾಡಿ ಬಳಿ ನಡೆದಿದೆ.

ಉದ್ಯಾವರದ ಕಂಪನಬೆಟ್ಟು ನಿವಾಸಿ ಪ್ರವೀಣ್ ಮೊಬೈಲ್ ಕಳೆದುಕೊಂಡ ವ್ಯಕ್ತಿ. ಇವರು ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ವಾಕಿಂಗ್ ಮಾಡಿ , ದೇವಸ್ಥಾನಕ್ಕೆ ಹೋಗಿ ವಾಪಾಸ್ಸು ಮನೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಪ್ರವೀಣ್ ಅವರು ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ಕೆಟಿಎಂ ಬೈಕ್ ನಲ್ಲಿ ಬಂದ ಇಬ್ಬರು ಬಿಳಿ ಬಣ್ಣದ ಹೆಲ್ಮೆಟ್ ಧಾರಿಗಳು, ಇವರ ಬಳಿ ತುಳುವಿನಲ್ಲಿ ಕಲ್ಸಂಕಕ್ಕೆ ಹೋಗುವ ದಾರಿ ಕೇಳಿದ್ದಾರೆ. ಈ ವೇಳೆ ಪ್ರವೀಣ್ ಅವರು ಉತ್ತರಿಸುತ್ತಿದ್ದಂತೆ ಬೈಕ್ ನ ಹಿಂಬದಿ ಸವಾರ ಪ್ರವೀಣ್ ಬಳಿ ಇದ್ದ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. 

ಈ ಬಗ್ಗೆ ಪ್ರವೀಣ್ ಅವರು ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!