ಲ್ಯಾಪ್‌ಟಾಪ್‌ ಬಳಕೆ: ಸಾಫ್ಟ್‌ವೇರ್‌ ಎಂಜಿನಿಯರ್‌ ಸಿಡಿಲು ಬಡಿದು ಸಾವು

ಶಂಕರನಾರಾಯಣ: ಬಂಡ್ಸಾಲೆ ವಂಡಾರಿನಲ್ಲಿ ಗುರುವಾರ  ಸಿಡಿಲು ಬಡಿದು ಸ್ಥಳೀಯ ನಿವಾಸಿ ಸಾಫ್ಟ್‌ವೇರ್ ಎಂಜಿನಿಯರ್ ಚೇತನ್ (24) ಮೃತರಾಗಿದ್ದಾರೆ.

ಮನೆಯಲ್ಲಿ ಲ್ಯಾಪ್‌ಟಾಪ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭ ಸಿಡಿಲಿನ ಹೊಡೆತಕ್ಕೆ ಒಳಗಾಗಿ ಗಂಭೀರವಾಗಿ ಅಸ್ವಸ್ಥತಗೊಂಡಿದ್ದು ತಕ್ಷಣ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚೇತನ್ ಮೃತಪಟ್ಟಿರುವುದಾಗಿ  ವೈದ್ಯರು ತಿಳಿಸಿದರು.

ಬೆಂಗಳೂರಿನ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಯಾಗಿದ್ದ ಚೇತನ್‌ ಕೋವಿಡ್‌ ಕಾರಣದಿಂದ ಹಲವು ತಿಂಗಳಿಂದ ಮನೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ

Leave a Reply

Your email address will not be published. Required fields are marked *

error: Content is protected !!