ಗಣೇಶ ಕೊಲೆಕಾಡಿಯವರಿಗೆ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ

ಉಡುಪಿಯ ಯಕ್ಷಗಾನ ಕಲಾರಂಗ ಯಕ್ಷ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಛಾಂದಸ, ಪ್ರಸಂಗ ಕರ್ತ, ಕಲಾವಿದ ಗಣೇಶ ಕೊಲೆಕಾಡಿ ಆಯ್ಕೆಯಾಗಿದ್ದಾರೆಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 25, ಶುಕ್ರವಾರ ಸಂಜೆ 5 ಗಂಟೆಗೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ. ಪ್ರಶಸ್ತಿಯು ರೂಪಾಯಿ 40,000 ನಗದು ಪುರಸ್ಕಾರ ಸಹಿತ ಪ್ರಶಸ್ತಿಗಳನ್ನೊಳಗೊಂಡಿರುತ್ತದೆ.

Leave a Reply

Your email address will not be published. Required fields are marked *

error: Content is protected !!