ಉಡುಪಿ: ಕೆನರಾ ಬ್ಯಾಂಕ್ ಉದ್ಯೋಗಿ ಅನುಮಾನಸ್ಪದ ಸಾವು

ಉಡುಪಿ: ಉದ್ಯಾವರ ಪಾಪಿನಾಶಿನಿ ನದಿಯಲ್ಲಿ ಬ್ಯಾಂಕ್‌ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದ್ದು ಕಾಲು ಜಾರಿ ಬಿದ್ದಿರುವ ಅಥವಾ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೃತಪಟ್ಟವರನ್ನು ಉಡುಪಿ ಕೆಥೋಲಿಕ್ ಸೆಂಟರ್‌ನ ಕೆನರಾ ಬ್ಯಾಂಕ್ ಉದ್ಯೋಗಿ ರಿಯಾಜ್ (43) ಎಂದು ಗುರುತಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ರಿಯಾಜ್ ಅವರು ನದಿಗೆ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಘಟನೆಯ ಕುರಿತು ಮಾಹಿತಿ ಪಡೆದ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!