ಉಡುಪಿ: ಭಾರೀ ಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಮರ, ವಿದ್ಯುತ್ ಕಂಬಗಳು ಧರಶಾಹಿ
ಉಡುಪಿ: ಇಂದು ಮಧ್ಯಾಹ್ನ ಸುರಿದ ಭಾರೀ ಮಳೆಗೆ ಚಿಟ್ಪಾಡಿ ಬಳಿಯ ವಿಜಯ ವೀರ ಸಂಘ ರಸ್ತೆಯಲ್ಲಿದ್ದ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ.
ಸ್ಥಳೀಯ ಯುವಕರು ಹಾಗೂ ಎನ್. ಎಸ್. ಯು.ಐ ಜಿಲ್ಲಾ ಉಪಾಧ್ಯಕ್ಷ ಶರತ್ ಕುಂದರ್ ಸಂಭಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸ್ಥಳೀಯರು ಹಾಗೂ ವಿಜಯ ವೀರ ಸಂಘದ ಸದಸ್ಯರುಗಳ ಸಹಾಯದಿಂದ ಮರವನ್ನು ರಸ್ತೆಯಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.





