ಉಡುಪಿ: ಭಗವತಿ ಟೂರಿಸ್ಟ್ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲಿಕ ವಿನಯ್‌ರಾಜ್ ನಿಧನ

ಉಡುಪಿಯ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಭಗವತಿ ಟೂರಿಸ್ಟ್ ಬಸ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ (51) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ.

ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು,ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಬೆಳಿಗ್ಗೆ ಇಹಲೋಕ ತ್ಯಜಿಸಿದರು.

ಟೂರಿಸ್ಟ್ ಬಸ್ ಬುಕ್ಕಿಂಗ್ ಕ್ಷೇತ್ರದಲ್ಲಿ ಮೂವತ್ತು ವರುಷಗಳಿಂದ ಸೇವೆ ಸಲ್ಲಿಸುತ್ತಿದ್ದ ವಿನಯ್ ರಾಜ್ , ಟೂರಿಸ್ಟ್ ಹಾಗೂ ಸರ್ವೀಸ್ ಬಸ್ ಸಂಘದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಧೀರ್ಘ ಕಾಲದ ಕೋಶಧಿಕಾರಿ ಹುದ್ದೆ ,ಹಾಗೂ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ವ್ಯವಹಾರಿಕಾವಾಗಿಯೂ ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದರು.

ಮೃತರು ತಾಯಿ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ

ಅಂತ್ಯಕ್ರಿಯೆಯ ವಿಧಿವಿಧಾನಗಳು ನಿಡಂಬಳ್ಳಿ ಸ್ವ ಗೃಹದಲ್ಲಿ ಇಂದು ಮುಂಜಾನೆ 11 ಗಂಟೆಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!