ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ: ಗಣ್ಯರಿಂದ ಗೌರವ

ದೆಹಲಿ: ಇಂದು, ರಾಷ್ಟ್ರ ರಾಜಕಾರಣದಲ್ಲಿ ಅಜಾತ ಶತ್ರು ಎಂದೇ ಪ್ರಸಿದ್ದಿಯಾದ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 96 ನೇ ಜನ್ಮದಿನಾಚರಣೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಸೇರಿದಂತೆ ಅನೇಕ ಗಣ್ಯರು ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದ್ದಾರೆ.

ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಥಳದ ಬಳಿ ನಿರ್ಮಾಣ ಮಾಡಿರುವ ಸದೈವ್ ಅಟಲ್ ಸ್ಮಾರಕಕ್ಕೆ ಮೋದಿ ಸಹಿತ ಗಣ್ಯರು ತೆರಳಿ ವಾಜಪೇಯಿ ಸಮಾಧಿಗೆ ಪೂಜೆ ಮಾಡಿ, ಪುಷ್ಪ ನಮನ ಸಲ್ಲಿಸಿ  ಗೌರವ ಸೂಚಿಸಿದರು. ಇದರೊಂದಿಗೆ ವಾಜಪೇಯಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ರೈತರ ದಿನಾಚರಣೆಯನ್ನು ಹಮ್ಮಿಕೊಂಡಿದೆ.

2018ರ ಆಗಸ್ಟ್ 16ರಂದು ದೆಹಲಿಯಲ್ಲಿದೀರ್ಘಕಾಲದ ಅನಾರೋಗ್ಯಂದಿಂದ ಬಳಲುತ್ತಿದ್ದ ವಾಜಪೇಯಿ ಅವರು  ಕೊನೆಯುಸಿರೆಳೆದಿದ್ದರು.

Leave a Reply

Your email address will not be published. Required fields are marked *

error: Content is protected !!