ಜಿಲ್ಲಾ ಯುವಮೋರ್ಚಾ ವತಿಯಿಂದ ಅಟಲ್‌ಜೀ ಜನ್ಮ ದಿನಾಚರಣೆ

ಉಡುಪಿ : ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನೀಲಾವರ ಗೋಶಾಲೆಯಲ್ಲಿ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನಾಚರಣೆ ಅಂಗವಾಗಿ ಮತ್ತು ಇತ್ತೀಚೆಗೆ ರಾಜ್ಯ ಸರಕಾರ ಜಾರಿಗೆ ತಂದ ಗೋಹತ್ಯೆ ನಿಷೇದ ಕಾಯ್ದೆಯನ್ನು ಸ್ವಾಗತಿಸಿ ಗೋಶಾಲೆಯನ್ನು ಸ್ವಚ್ಛಗೊಳಿಸಿ, ಗೋಪೂಜೆ ಮಾಡುವ ಮೂಲಕ ಆಚರಿಸಿದರು.

ಯುವಮೋರ್ಚಾ ಜಿಲ್ಲಾ ಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ ಮಾತನಾಡಿ ಅಟಲ್‌ಜೀ ಕೇವಲ ಅಜಾತ ಶತ್ರು ಅಲ್ಲ, ನಿಜಾರ್ತದಲ್ಲಿ ವಿಶ್ವ ಮಾನವ ಎಂಬುವುದಕ್ಕೆ ಅವರ ನಡೆ ನುಡಿ ಸಾಕ್ಷಿ. ಅತ್ಯಂತ ಸರಳ ಜೀವನ ಶೈಲಿ ಅಳವಡಿಸಿಕೊಂಡಿದ್ದ ವಾಜಪೇಯಿ ಅವರು ಯಾರ ಮನಸ್ಸನ್ನು ನೋವಿಸಿದವರಲ್ಲ. ಪ್ರತಿಪಕ್ಷಗಳನ್ನು ಸಹ ಗೌರವಯುತವಾಗಿ ಕಾಣುತ್ತಿದ್ದ ಅವರನ್ನು ಅಜಾತ ಶತ್ರು ಎಂದು ದೇಶದ ಜನತೆ ಕರೆಯುತ್ತಿದ್ದರು ಎಂದರು.

ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ಕುಮಾರಿ ಶ್ವೇತಾ ರವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ಅಟಲ್‌ಜೀಯವರು ದೇಶದಲ್ಲಿ ಗೋಹತ್ಯೆ ನಿಷೇದ ಆಗುವ ಬಗ್ಗೆ ಬಹಳ ಪ್ರಯತ್ನ ಪಟ್ಟಿದ್ದರು. ಇಂದಿನ ಸಮಯದಲ್ಲಿ ರಾಜ್ಯ ಸರಕಾರ ಜಾರಿಗೆ ತಂದ ಗೋಹತ್ಯೆ ನಿಷೇದದಿಂದ ಸ್ವರ್ಗಿಯ ಅಟಲ್ ಬಿಹಾರಿ ವಾಜಪೇಯಿಯವರ ಅಂದಿನ ಪ್ರಯತ್ನ ಇವತ್ತು ಸಾಕಾರಗೊಂಡಿರುವುದಕ್ಕೆ ಗೋಪ್ರೇಮಿಗಳು ಸಂತಸ ವ್ಯಕ್ತಪಡಿಸಿರುತ್ತಾರೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶರತ್ ಶೆಟ್ಟಿ ಉಪ್ಪುಂದ, ವಿನೋದ್ ಪೂಜಾರಿ ಶಾಂತಿನಿಕೇತನ, ಕಾರ್ಯದರ್ಶಿ ಅಭಿರಾಜ್ ಸುವರ್ಣ ಮತ್ತು ಇನ್ನಿತರ ಯುವಮೋರ್ಚಾ ಜಿಲ್ಲಾ ಮತ್ತು ಮಂಡಲ ಪಧಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!