ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಯುವಕ ಸ್ಥಳದಲ್ಲೇ ಮೃತ್ಯು

ಉಳ್ಳಾಲ : ಬೈಕ್ ಮತ್ತು ಆ್ಯಕ್ಟಿವಾ ನಡುವೆ ನಡೆದ ಮುಖಾಮುಖಿ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ತೊಕ್ಕೊಟ್ಟುವಿನ  ಕೆರೆಬೈಲಿನ ಕೊರಗಜ್ಜನ ಕಟ್ಟೆ ಸಮೀಪ ಇಂದು (ಡಿ.26) ನಡೆದಿದೆ.ಮೃತಪಟ್ಟ ಬೈಕ್ ಸವಾರನನ್ನು ಸಂತೋಷ್ ನಗರ ನಿವಾಸಿ ಸಂದೇಶ್ ಪೂಜಾರಿ (31) ಎಂದು ಗುರುತಿಸಲಾಗಿದೆ.

ಸಂದೇಶ್ ಅವರು, ಕಣೀರ್ ತೋಟದ ಜಾತ್ರೆ ನೋಡಲು ತೆರಳಿದ್ದು, ಬೈಕ್ ನಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ಘಟನೆ ನಡೆದಿದೆ. ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ  ಸಂದೇಶ್ ರಸ್ತೆಗೆಸೆಯಲ್ಪಟ್ಟಿದ್ದಾರೆ. ಈ ವೇಳೆ ಸಂದೇಶ್ ಅವರ ತಲೆಗೆ ಗಂಭೀರ ಗಾಯವಾಗಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 

ಅಪಘಾತದಲ್ಲಿ ಆ್ಯಕ್ಟಿವಾ ಸವಾರನೂ ಗಾಯಗೊಂಡಿದ್ದು, ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!