ಉಡುಪಿ: ಅಕ್ರಮ ಮರಳು ಸಾಗಾಟ, ಐದು ಟಿಪ್ಪರ್ ವಶಕ್ಕೆ

ಉಡುಪಿ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಮಿನಿ ಟಿಪ್ಪರ್ ಸೇರಿದಂತೆ ಒಟ್ಟು ಐದು ಟಿಪ್ಪರ್‌ಗಳನ್ನು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ವಶಪಡಿಸಿಕೊಂಡಿರುವ ಎರಡು  ಪ್ರತ್ಯೇಕ  ಘಟನೆ  ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಒಂದು ಪ್ರಕರಣದಲ್ಲಿ ಅಕ್ರ‌ಮ ಮರಳು ಸಾಗಾಟದ ಈ ಬಗ್ಗೆ  ಖಚಿತ ಮಾಹಿತಿ ಪಡೆದ ಗಣಿ ಅಧಿಕಾರಿಗಳಾದ ಸಂದೀಪ್ ಪಾಟೀಲ್ ಹಾಗೂ ಮಹೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ  ವೇಳೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ಗ್ರಾಮದ ಜಂಕ್ಷನ್‌ನಲ್ಲಿ ಆಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಮಿನಿ ಟಿಪ್ಪರ್‌ನ್ನು ಹಾಗೂ  ತಲಾ ಆರು ಟನ್ ಗಳಷ್ಟು ಮರಳನ್ನು ವಶಪಡಿಸಿಕೊಂಡು ಮಣಿಪಾಲ ಠಾಣೆಗೆ ಹಸ್ತಾಂತರಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಪುತ್ತೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 3 ಟ್ರಕ್ ಹಾಗೂ ತಲಾ 10 ಟನ್ ಆಕ್ರಮ ಮರಳನ್ನು ವಶಪಡಿಸಿಕೊಂಡು ಉಡುಪಿ ನಗರ ಠಾಣೆಗೆ ಹಸ್ತಾಂತರಿಸಲಾಗಿದೆ‌ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!