ನೆಲ್ಯಾಡಿ: ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆಗೆ ಶರಣಾದ ಯುವತಿ

ಮಂಗಳೂರು: ಬೆಂಕಿ ಹಚ್ಚಿಕೊಂಡು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದ ನೆಲ್ಯಾಡಿಯಲ್ಲಿ ನಡೆದಿದೆ.

ನವ್ಯಾ ಜೋಸೆಫ್ (22)  ಆತ್ಮಹತ್ಯೆ ಗೆ ಶರಣಾದ ಯುವತಿ. ಇವರು ನಿನ್ನೆ ಮನೆಯಲ್ಲಿ ರಾತ್ರಿ 10.30ಕ್ಕೆ ಊಟ ಮುಗಿಸಿ ತನ್ನ ಕೊನೆಗೆ ತೆರಳಿದ್ದರು. ಆ ಬಳಿಕ ಇಂದು ಮುಂಜಾನೆ ಕೋಣೆಯಿಂದ ಹೊರಗೆ ಬಾರದಿರುವುದನ್ನು ಗಮನಿಸಿ, ಮನೆಯವರು ಬಾಗಿಲು ಮುರಿದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.  ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!