ತಹಶೀಲ್ದಾರ್ ಕಚೇರಿಗೆ ಎಸಿಬಿ ದಾಳಿ – ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ

ಮಂಗಳೂರು: ನಗರದ ತಹಶೀಲ್ದಾರ್ ಕಚೇರಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ದ್ವಿತೀಯ ದರ್ಜೆ ಸಹಾಯಕ (ಎಸ್ಡಿಎ) ಸಿಬ್ಬಂದಿಯೊಬ್ಬ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.
ಎಸ್ಡಿಎ ಸಿಬ್ಬಂದಿ ರಫೀಕ್ ಅಬ್ದುಲ್(42) ಎಸಿಬಿ ಬಲೆಗೆ ಬಿದ್ದ ಸಿಬ್ಬಂದಿ ಈತ ಕಚೇರಿಯ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಗೆ 40 ಸಾವಿರ ರೂ.ಬೇಡಿಕೆ ಇಟ್ಟಿದ್ದ ಎಂದು ಎಸಿಬಿ ಕಚೇರಿಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು.
ಎಸಿಬಿ ಮಾರ್ಗದರ್ಶನದಂತೆ ದೂರುದಾರ ವ್ಯಕ್ತಿ ಆರೋಪಿ ಸಿಬ್ಬಂದಿಗೆ ನಗದು ನೀಡುತ್ತಿದ್ದ ಸಂದರ್ಭ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿ ನಗದು ವಶಕ್ಕೆ ಪಡೆಯಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.