ಉಡುಪಿ: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ|ಪುಷ್ಪಾ ಅಮರನಾಥ ಕಾಂಗ್ರೆಸ್ ಭವನ ಭೇಟಿ

ಉಡುಪಿ: ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಮಂಗಳವಾರ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಡಾ| ಪುಷ್ಪಾ ಅಮರನಾಥ ಅವರು ಭೇಟಿ ನೀಡಿದರು.
ಡಾ. ಪುಷ್ಪಾ ಅಮರನಾಥರವರು ಜಿಲ್ಲಾ ಮಹಿಳಾ ಕಾಂಗ್ರೆಸ್ ಪಕ್ಷ ಸಂಘಟನೆ ಬಗ್ಗೆ ಹಮ್ಮಿಕೊಂಡ ಕಾರ್ಯಕ್ರಮಗಳನ್ನು ಅವಲೋಕಿಸಿ ಹಲವು ಸಲಹೆ ಸೂಚನೆಗಳನ್ನಿತ್ತರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್ ಅಪ್ಪಿ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು. ಮಹಿಳಾ ಕಾಂಗ್ರೆಸ್ ಉಡುಪಿ ವೀಕ್ಷಕರಾದ ಸುರೇಖ ಚಂದ್ರಹಾಸ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸರಸು ಬಂಗೇರ, ಮಾಜಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್, ವಕ್ತಾರ ಭಾಸ್ಕರ್ ರಾವ್ ಕಿದಿಯೂರು, ಪ್ರಧಾನ ಕಾರ್ಯದರ್ಶಿ ಅಣ್ಣಯ್ಯ ಶೇರಿಗಾರ್, ಮಹಿಳಾ ಕಾಂಗ್ರೆಸ್ನ ಪ್ರಭಾ ಶೆಟ್ಟಿ, ಪ್ರಭಾವತಿ ಸಾಲ್ಯಾನ್, ಜಯಶ್ರೀ ಶೇಟ್, ಆಡ್ನೆಸ್ ಡೇಸಾ, ಪ್ರೆಸಿಲ್ಲಾ ಡಿ’ಮೆಲ್ಲೊ, ಕುಸುಮಾ ಕಾಮತ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳಾದ ಕೀರ್ತಿ ಶೆಟ್ಟಿ, ಪ್ರಶಾಂತ್ ಜತ್ತನ್ನ, ಕಾಂಗ್ರೆಸ್ ಮುಖಂಡರಾದ ಉದ್ಯಾವರ ನಾಗೇಶ್ ಕುಮಾರ್, ಲಕ್ಷಣ ಪೂಜಾರಿ, ವೆಂಕಟೇಶ್, ಅಶೋಕ್ ಸುವರ್ಣ, ಯುವ ಕಾಂಗ್ರೆಸ್ನ ಹಮದ್ ಉಪಸ್ಥಿತರಿದ್ದರು.