ಬಸ್ ನಿಲ್ದಾಣದಲ್ಲಿ ಪಾರ್ಟಿ: ನಾಲ್ಕು ಬೈಕ್‌ ವಶ, 6 ಮಂದಿಯ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ  ಮದ್ಯಪಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಉಚ್ಚಿಲ ಬಸ್‌ ನಿಲ್ದಾಣದಲ್ಲಿ ನಡೆದಿದೆ. 

ಉಚ್ಚಿಲ ಬಸ್ ನಿಲ್ದಾಣದಲ್ಲಿ 6 ಮಂದಿ ತಡರಾತ್ರಿ ಪಾರ್ಟಿ ಮಾಡುತ್ತಿರುವುದು ಕಂಡುಬಂದಿದ್ದು ಅವರಿಗೆ  ಪೊಲೀಸ್ ಆಯುಕ್ತ ಶಶಿಕುಮಾರ್  ಕಠಿಣ ಎಚ್ಚರಿಕೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಯುವಕರ ತಂಡದ ಮದ್ಯ ಪಾರ್ಟಿಯ ವಿಡಿಯೋ ರೆಕಾರ್ಡಿಂಗ್ ಮಾಡಿದ್ದು, ನಾಲ್ಕು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಆರು ಮಂದಿಯ ವಿರುದ್ದ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇವಲ ಎರಡು ದಿನಗಳ ಹಿಂದೆ ಅಧಿಕಾರ ವಹಿಸಿಕೊಂಡ ಶಶಿ ಕುಮಾರ್ ಅವರು ತಡರಾತ್ರಿಯಲ್ಲಿ ಸುತ್ತಾಡುವ ಜನರ ವಿರುದ್ಧ ಕ್ರಮ ಕೈಗೊಳ್ಳುವ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ತಡರಾತ್ರಿ ಯಾರಿಗಾದರೂ ತೊಂದರೆ ಮಾಡುವವರ ವಿರುದ್ಧ ಹಾಗೂ ವಿನಾಃಕಾರಣ ಸುತ್ತಾಡುವವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!