ಸಂಪುಟ ವಿಸ್ತರಣೆ: ಅಸಮಾಧಾನ ಇದ್ದವರು ವರಿಷ್ಠರ ಜೊತೆ ಮಾತು ಕತೆ ನಡೆಸಲಿ – ಸಿಎಂ

ಬೆಂಗಳೂರು: ಸಂಪುಟ ವಿಸ್ತರಣೆ ಕುರಿತು ಅಸಮಾಧಾನ ಇದ್ದವರು ಬೇಕಾದರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತು ಕತೆ ನಡೆಸಲಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಸಮಾಧಾನ ಇದ್ದವರು ಬೇಕಾದ್ರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತಾಡಲಿ ಇದಕ್ಕೆ ನನ್ನ ಅಭ್ಯಂತರವಿಲ್ಲ. ಸಚಿವ ಸ್ಥಾನ ವಂಚಿತರು ಇಲ್ಲಿ ಹಗುರವಾಗಿ ಮಾತನಾಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಶಾಸಕರು ಮಾಡೋದು ಬೇಡ. ಯಾವುದೇ ಶಾಸಕರು ವಿರೋಧ ಇದ್ದರೆ ದೆಹಲಿಗೆ ಹೋಗಲಿ. ಅಲ್ಲಿ ವರಿಷ್ಠರಿಗೆ ದೂರು ನೀಡಲಿ. ವರಿಷ್ಠರು ಈ ಬಗ್ಗೆ ಸರಿ ತಪ್ಪು ಯಾವುದು ಅಂತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!