ಉಡುಪಿ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ – ಆತ್ಮಹತ್ಯೆ ಶಂಕೆ

ಉಡುಪಿ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಉಡುಪಿಯ 76 ಬಡಗುಬೆಟ್ಟಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುರೇಶ್ ಶೆಟ್ಟಿ (52 ) ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ ಬಡಗುಬೆಟ್ಟಿನ ಪರಿಸರದಲ್ಲಿರುವ ಹಳೆ ಮನೆಯೊಂದರ ಜಂತಿಗೆ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ  ಕಂಡುಬಂದಿದೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ವ್ಯಕ್ತಿಯು ನಾಲ್ಕು ದಿನಗಳ ಹಿಂದೆ ಮೃತಪಟ್ಟಿರ ಬಹುದು ಎಂದು ಹೇಳಲಾಗುತ್ತಿದೆ.

ವ್ಯಕ್ತಿ  ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!