ಪ್ರತಿಭಟನೆ ತಡೆದರೆ ರಸ್ತೆ ಬಂದ್ ಮಾಡಿ: ಡಿಕೆ ಶಿವಕುಮಾರ್

ಬೆಂಗಳೂರು: ಪೊಲೀಸರು ಪ್ರತಿಭಟನೆ ತಡೆದರೆ ರಸ್ತೆ ಬಂದ್ ಮಾಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರೈತರು ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆನೀಡಿದ್ದಾರೆ. ಕೇಂದ್ರದ ಕೃಷಿ ಕಾಯ್ದೆಯನ್ನು ರದ್ದು ಗೊಳಿಸುವಂತೆ ಆಗ್ರಹಿಸಿ ಇಂದು ನಡೆಸಲು ನಿರ್ಧರಿಸಿರುವ ರಾಜಭವನ ಚಲೋ ಕುರಿತು ಟ್ವೀಟ್ ಮಾಡಿರುವ ಅವರು,  ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರ ಜನರ ಪ್ರತಿಭಟನೆ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ” ಎಂದಿದ್ದಾರೆ. 

“ಕೇಂದ್ರ ಹಾಗೂ ರಾಜ್ಯ ಸರಕಾರ ಜಾರಿಗೊಳಿಸಿರುವ ರೈತ ಮತ್ತು ಜನ ವಿರೋಧಿ ಮಸೂದೆಗಳ ವಿರುದ್ಧದ ರಾಜಭವನ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿರುವ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಮಂಗಳವಾರ ರಾತ್ರಿಯಿಂದಲೇ ಪೊಲೀಸರು ಹೆದ್ದಾರಿಯಲ್ಲೇ ತಡೆಯುತ್ತಿದ್ದಾರೆ.ಇದಕ್ಕೆ ಸಾತ್ ಕೊಡುತ್ತಿರುವ ರಾಜ್ಯ ಬಿಜೆಪಿ ಸರಕಾರ ದೌರ್ಜನ್ಯ ನಡೆಸುತ್ತಿದೆ”. ನಮ್ಮ ಹೋರಾಟದ ಹಕ್ಕು ಕಸಿಯುವ ಅಧಿಕಾರ ಯಾರಿಗೂ ಇಲ್ಲ. ಹೀಗಾಗಿ ಪೊಲೀಸರು ತಡೆದ ಕಡೆಯೇ ರಸ್ತೆಯಲ್ಲಿ ಪ್ರತಿಭಟನೆ ಮಾಡಿ, ರಸ್ತೆ ಬಂದ್ ಮಾಡಿ” ಎಂದು ತಮ್ಮ ಟ್ವೀಟ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!