ಗೋ ರಕ್ಷಕರ ಮೇಲೆ ದಾಖಲಾಗಿರುವ ಪ್ರಕರಣ ಹಿಂಪಡೆಯುವ ಚಿಂತನೆ: ಚವ್ಹಾಣ್

ಮಂಗಳೂರು : ಗೋ ಅಕ್ರಮ ಸಾಗಾಟ  ತಡೆದು ಹಲ್ಲೆ ನಡೆಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹಾಗೂ ಗೋ ರಕ್ಷಕರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜ.19 ರಂದು ನಡೆದ ಪಶುಸಂಗೋಪನೆ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಮಾತನಾಡಿದ ಅವರು, ಹಿಂದೆ ಗೋಸಂರಕ್ಷಣೆಗಾಗಿ ಕಾರ್ಯಕರ್ತರು ಗೋಸಾಗಾಟ ತಡೆದವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದರೆ ಅದನ್ನು ತೆರವುಗೊಳಿಸಬೇಕು ಎಂದಿದ್ದೇನೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ನಿರ್ಣಯ ಕೈಗೊಂಡಿಲ್ಲ. ಈ ಬಗ್ಗೆ ಗೃಹಸಚಿವರ ಜತೆಗೆ ಚರ್ಚಿಸಬೇಕಿದೆ ಎಂದರು.

ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರೊಂದಿಗೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಗೋಹತ್ಯೆ ಕಾಯ್ದೆಯನ್ನು ಉಲ್ಲಂಘಿಸುವವರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದ ಅವರು,  ಕಾಯ್ದೆ ಉಲ್ಲಂಘಿಸಿದವರಿಗೆ ಮೂರು ವರ್ಷದಿಂದ ಆರು ವರ್ಷ ದವರೆಗೆ ಜೈಲು ಶಿಕ್ಷೆ, ಮೊದಲನೇ ಅಪರಾಧಕ್ಕೆ 50 ಸಾವಿರದಿಂದ 5 ಲಕ್ಷದವರೆಗೆ ಹಾಗೂ ಎರಡನೇ ಸಲ ಮಾಡಿದ ಅಪರಾಧಕ್ಕೆ ಒಂದು ಲಕ್ಷದಿಂದ 10 ಲಕ್ಷದ ವೆರೆಗೆ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಜಾನುವಾರುಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಾಣೆ ಮಾಡುವಾಗ ಪಶು ವೈದ್ಯರಿಂದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು, ಸಾಗಾಣಿಕಾ ವಾಹನದಲ್ಲಿ 5-6 ದನಗಳಿಗೆ ಮಾತ್ರ ಅವಕಾಶವಿರುತ್ತದೆ. ಅಲ್ಲದೇ ಜಾನುವಾರುಗಳಿಗೆ ಅಗತ್ಯವಿರುವ ಆಹಾರ ಮತ್ತು ನೀರಿನ ವ್ಯವಸ್ಥೆಯನ್ನು ವಾಹನದಲ್ಲಿ ಇರಬೇಕು ಎಂದರು. ಗರ್ಭಧಾರಿತ ಜಾನುವಾರುಗಳನ್ನು ಸಾಗಾಣಿಕೆ ಮಾಡಲು ಅವಕಾಶ ನೀಡಬಾರದು. ಜಾನುವಾರುಗಳ ಸಾಗಾಣಿಕೆಯನ್ನು ಮಾಡಲು ರಾತ್ರಿ 8 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಅವಕಾಶ ಇರುವುದಿಲ್ಲ. ಅಲ್ಲದೆ ಬೇಸಿಗೆಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೂ ಸಹ ಸಾಗಾಣಿಕೆಯನ್ನು ನಿರ್ಭಂಧಿಸಲಾಗಿದೆ ಇದರೊಂದಿಗೆ, ಈ ಕಾಯ್ದೆ ವ್ಯಾಪ್ತಿಯಲ್ಲಿ ಹಸು, ಕರು ಮತ್ತು ಹೋರಿಗಳು ಸೇರಿವೆ. 13 ವರ್ಷದೊಳಗಿನ ಎಮ್ಮೆ ಹಾಗೂ ಕೋಣಗಳನ್ನು ಸಹ ಒಳಗೊಂಡಿರುತ್ತದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!