ಉಡುಪಿ ಕರಾವಳಿ ಕಾವಲು ಪೊಲೀಸ್ ತಂಡಕ್ಕೆ ಗಣರಾಜ್ಯೋತ್ಸವ ಕಪ್

ಉಡುಪಿ: 72ನೇ ಗಣರಾಜ್ಯೋತ್ಸವ ಪ್ರಯುಕ್ತ ಉಡುಪಿ ಜಿಲ್ಲಾಡಳಿತ ಮಣಿಪಾಲದ ಎಂಡ್ ಪಾಯಿಂಟ್ ಮೈದಾನದಲ್ಲಿ ಆಯೋಜಿಸಲಾಗಿದ್ದ ‘ಗಣರಾಜ್ಯೋತ್ಸವ ಕಪ್ -2020’ ಕ್ರಿಕೆಟ್ ಕ್ರೀಡಾ ಕೂಟದಲ್ಲಿ ಕರಾವಳಿ ಕಾವಲು ಪೊಲೀಸ್ ತಂಡ ಉಡುಪಿ ಜಿಲ್ಲಾ ಗಣರಾಜ್ಯೋತ್ಸವ ಕ್ರಿಕೆಟ್ ಕಪ್ ತಮ್ಮದಾಗಿಸಿಕೊಂಡಿದೆ.

ಸೀಮಿತ ಓವರ್‌ಗಳ ಈ ಕ್ರಿಕೆಟ್ ಪಂದ್ಯಾಟದಲ್ಲಿ ಡಿಸಿ ಇಲೆವೆನ್, ಉಡುಪಿ ಜಿಲ್ಲಾ ಪೊಲೀಸ್, ಕರಾವಳಿ ಕಾವಲು ಪೊಲೀಸ್, ಜಿಲ್ಲಾ ಸರಕಾರಿ ವೈದ್ಯರ ತಂಡ, ಜಿಲ್ಲಾ ಪಂಚಾಯತ್ ಮತ್ತು ಪತ್ರಕರ್ತರ ತಂಡ ಪಾಲ್ಗೊಂಡಿದ್ದವು. ನಿಗದಿತ 10 ಓವರ್ ಗಳ ಮೊದಲ ಪಂದ್ಯದಲ್ಲಿ ಆರಂಭದಲ್ಲಿ ಕರಾವಳಿ ಪೊಲೀಸರ ತಂಡ ಜಿಲ್ಲಾ ವೈದ್ಯಾಧಿಕಾರಿಗಳ ತಂಡವನ್ನು ಸೋಲಿಸಿತು.

ಡಿಸಿ ಇಲೆವೆನ್ ಮತ್ತು ಜಿಲ್ಲಾ ಪೊಲೀಸ್ ತಂಡಗಳ ನಡುವೆ ನಡೆದ ಜಿದ್ದಾಜಿದ್ದಿನ ಲೀಗ್ ಪಂದ್ಯದಲ್ಲಿ ಎಸ್ ಪಿ. ವಿಷ್ಣುವರ್ಧನ್ ನೇತೃತ್ವದ ತಂಡ ಗೆದ್ದಿದ್ದು, ಸೆಮಿ ಫೈನಲ್ ನಲ್ಲಿ ಪತ್ರಕರ್ತರ ತಂಡ ಜಿಲ್ಲಾ ಪೊಲೀಸ್ ತಂಡದ ಎದುರು ಸೋಲನ್ನು ಅನುಭವಿಸುವಂತಾಯಿತು. ಇದರೊಂದಿಗೆ ಸಿಇಒ ನವೀನ್ ಭಟ್ ನೇತೃತ್ವದ ಜಿಲ್ಲಾ ಪಂಚಾಯತ್ ತಂಡವನ್ನು ಸಿಎಸ್‌ಪಿ ತಂಡ ಮಣಿಸಿ ಫೈನಲ್ ಗೆ ಪ್ರವೇಶಿಸಿತು.

ಇನ್ನು ಫೈನಲ್‌ನಲ್ಲಿ ಕರಾವಳಿ ಕಾವಲು ಪೊಲೀಸ್ ತಂಡ ಉಡುಪಿ ಜಿಲ್ಲಾ ಪೊಲೀಸ್ ತಂಡವನ್ನು ಮಣಿಸಿ 2020 ಗಣರಾಜ್ಯೋತ್ಸವ ಕಪ್ ಗೆದ್ದಿದ್ದು ಅಲ್ಲದೆ ಅದಾ ಗೆಲ್ಲುವ ಹಾಟ್ ಫೇವರೆಟ್ ತಂಡವೆಂದು ಬೀಗುತ್ತಿದ್ದ ಜಿಲ್ಲಾ ಪೊಲೀಸ್ ತಂಡವನ್ನು ಮಣಿಸಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತೆ ಮಾಡಿತು.

ಇನ್ನು ಪಂದ್ಯಾಕೂಟದಲ್ಲಿ ಜಿಲ್ಲಾ ಪೊಲೀಸ್ ತಂಡದಲ್ಲಿ ಆಡಿದ ಪ್ರಶಾಂತ್ ಪಡುಕೆರೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್, ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲು ಪೊಲೀಸ್ ಎಸ್ಪಿ ಚೇತನ್ ಕುಮಾರ್, ಜಿಲ್ಲಾ ಪಂಚಾಯತಿ ಸಿಇಓ ನವೀನ್ ಭಟ್, ಜಿಲ್ಲಾ ವೈದ್ಯಾಧಿಕಾರಿ ಡಾ. ಸುಧೀರ್ ಚಂದ್ರ ಕೊರೋನಾ ನೋಡಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಜಿಲ್ಲೆಯ ಠಾಣೆಗಳ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಕ್ರಿಕೆಟ್ ಪಂದ್ಯಾಟದಲ್ಲಿ ಪಾಲ್ಗೊಂಡರು.

Leave a Reply

Your email address will not be published. Required fields are marked *

error: Content is protected !!