ರಾಜ್ಯದಲ್ಲಿ ಮತ್ತೆ ಮುಂದುವರಿದ ಖಾತೆ ಅದಲು ಬದಲಿನ ಸರ್ಕಸ್!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ  ಸದ್ಯ ಖಾತೆ ಅದಲು ಬದಲಿನ ಸರ್ಕಸ್ ನಡೆಯುತ್ತಿದೆ. ಸಚಿವ ಸಂಪುಟ ವಿಸ್ತರಣೆ ಬಳಿ ಖಾತೆ ಹಂಚಿಕೆ ಮಾಡಲಾಗಿತ್ತು. ಆದರೆ ಖಾತೆ ಹಂಚಿಕೆಯಿಂದ ಹಲವಾರು ಮಂತ್ರಿಗಳ ಖಾತೆ ಅದಲು ಬದಲು ಮಾಡಲಾಗಿತ್ತು. ಇದರಿಂದ ಅನೇಕ ಸಚಿವರುಗಳು  ಅಸಮಾಧಾನಗೊಂಡ ಹಿನ್ನೆಲೆಯಲ್ಲಿ ಖಾತೆಯನ್ನು ಮರು ಹಂಚಿಕೆ ಮಾಡಲಾಗಿತ್ತು.

ಇದೀಗ ಎರಡು ಬಾರಿ ಖಾತೆ ಅದಲು-ಬದಲು ಮಾಡಿರುವ ಸಿಎಂ ಯಡಿಯೂರಪ್ಪ ಅವರು, ಈಗ ಮತ್ತೆ ಖಾತೆ ಅದಲು-ಬದಲು ಮಾಡಿದ್ದಾರೆ.   ಈ ಹಿಂದೆ ಸಚಿವ ಡಾ.ಕೆ.ಸುಧಾಕರ್ ಅವರಿಂದ ಹಿಂಪಡೆಯಲಾಗಿದ್ದ ವೈದ್ಯಕೀಯ ಶಿಕ್ಷಣ ಖಾತೆಯನ್ನು ಮತ್ತೆ ಅವರಿಗೇ ವರ್ಗಾಯಿಸಲಾಗಿದೆ. ಸದ್ಯ ಡಾ.ಕೆ ಸುಧಾಕರ್ ಅವರ ಬಳಿಯಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಖಾತೆಯ ಜೊತೆಗೆ ಮೂಲ ಸೌಕರ್ಯ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಹಾಗೂ ಸಚಿವ ಮಾಧುಸ್ವಾಮಿ ಅವರಿಗೆ ಪ್ರವಾಸೋದ್ಯಮ ಖಾತೆಯ ಜೊತೆಗೆ ಪರಿಸರ ಖಾತೆ ನೀಡಲಾಗಿದೆ. ಇನ್ನು, ಆನಂದ್ ಸಿಂಗ್ ಅವರಿಗೆ ಸಿಎಂ ಯಡಿಯೂರಪ್ಪ ಬಳಿಯಲ್ಲಿದ್ದಂತ ಮೂಲ ಸೌಕರ್ಯ ಖಾತೆ ಜೊತೆಗೆ ಸಚಿವ ಮಾಧುಸ್ವಾಮಿ ಬಳಿಯಲ್ಲಿದ್ದ ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!