ಪ್ರತೀ ತಾಲೂಕಿನಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಾಗ ಗುರುತಿಸಿ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕನಿಷ್ಠ 1 ರಿಂದ 2 ಗೋಶಾಲೆಗಳನ್ನು
ನಿರ್ಮಿಸಲು ಅಗತ್ಯವಿರುವ ಜಾಗವನ್ನು ಗುರುತಿಸಿ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಭಂದಕ ಮತ್ತು ಸಂರಕ್ಷಣೆ ನಿಯಮ 2020 ನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ರೈತರು ಮತ್ತು ಸಾರ್ವಜನಿಕರು ತಮ್ಮಲ್ಲಿನ ಅನುತ್ಪಾದಕ ಜಾನುವಾರುಗಳು, ಅಪಘಾತಗೊಂಡ ಜಾನುವಾರು, ಮತ್ತಿತರ ಜಾನುವಾರುಗಳನ್ನು ಸಂಬoಧಪಟ್ಟ ಅಧಿಕಾರಿಗಳಿಗೆ ನೀಡಿದಾಗ, ಅವುಗಳನ್ನು ಪೋಷಿಸಲು ಅನುಕೂಲವಾಗುವಂತೆ ಪ್ರತಿಯೊಂದು ತಾಲೂಕಿನಲ್ಲಿ ಗೋಶಾಲೆಗಳನ್ನು ಸ್ಥಾಪಿಸುವುದು ಅಗತ್ಯವಾಗಿದ್ದು, ಇದಕ್ಕಾಗಿ ಸೂಕ್ತ ಸ್ಥಳಾವಕಾಶವನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಡಿ.ಸಿ. ಸೂಚನೆ ನೀಡಿದರು.

ಗೋಶಾಲೆಗಳನ್ನು ಆರಂಭಿಸುವ ಸಂದರ್ಭದಲ್ಲಿ, ಅದೇ ಸ್ಥಳದಲ್ಲಿ ಮೇವು ಬೆಳೆಯಲು ಸಾಧ್ಯವಿರುವಂತಹ ಜಾಗವನ್ನು ಗುರುತಿಸುವಂತೆ ನೀಲಾವರ ಗೋಶಾಲೆಯ ಟ್ರಸ್ಟಿ ಡಾ.ಸರ್ವೋತ್ತಮ ಉಡುಪ ಹೇಳಿದರು. ಜಾನುವಾರುಗಳನ್ನು ಸಾಗಾಟ ಮಾಡುವಾಗ ಸಂಬoಧಪಟ್ಟ ಎಲ್ಲಾ ಪ್ರಾಧಿಕಾರಗಳಿಂದ ಅನುಮತಿ ಪಡೆದ ಅಗತ್ಯ ದಾಖಲಾತಿಗಳನ್ನು ಜೊತೆಯಲ್ಲಿಯೇ ಇಟ್ಟುಕೊಂಡಿರಬೇಕು. ಇಲ್ಲವಾದಲ್ಲಿ ಜಾನುವಾರು ಮಾಲೀಕ, ವಾಹನ ಮಾಲೀಕ, ಚಾಲಕ, ಸಹಾಯಕ, ಜಾನುವಾರ ಸಾಗಾಟದ ಸಹಾಯಕ ಈ ಎಲ್ಲರ ಮೇಲೂ ಕ್ರಮ ಕೈಗೊಳ್ಳಲು ನಿಯಮದಲ್ಲಿ ಅವಕಾಶವಿದೆ. ಸಾಗಾಟ ಸಮಯದಲ್ಲಿ ಜಾನುವಾರುಗಳಿಗೆ ಯಾವುದೇ ಗಾಯಗಳಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸಾಗಾಟದ ಮೊದಲು ಯಥೇಚ್ಛ ನೀರು/ ಆಹಾರ/ ಹಸಿ ಹುಲ್ಲು, ವಾಹನದಲ್ಲಿ ಸರಿಯಾದ ಗಾಳಿ ಬೆಳಕು ಇರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಜಾನುವಾರುಗಳ ಸಾಗಾಟಕ್ಕಾಗಿಯೇ ರೂಪಿಸಿರುವ ನಿಯಮಗಳನ್ವಯ, ಸೂಕ್ತ ವಾಹನದಲ್ಲಿ ಸಾಗಾಟ ಮಾಡಬೇಕು, ಸಾಗಾಟದ ವೇಗ ಗಂಟೆಗೆ 25 ಕಿ.ಮೀ ಮೀರುವಂತಿಲ್ಲ. ವಾಹನದಲ್ಲಿ ಪ್ರತೀ ಜಾನುವಾರುಗಳಿಗೆ ಪ್ರತ್ಯೇಕ ಕಂಪಾರ್ಟ್ಮೆ0ಟ್
ರೀತಿಯಲ್ಲಿ ವ್ಯವಸ್ಥೆ ಮಾಡಬೇಕು. ಖಾಸಗಿ ವಾಹನಗಳಲ್ಲಿ ಈ ರೀತಿಯ ಮಾರ್ಪಾಡು ಮಾಡಿಕೊಳ್ಳಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಅಗತ್ಯ ಪರವಾನಗಿಯನ್ನುನೀಡಬೇಕು. ವಾಹನಗಳಲ್ಲಿ ಜಾನುವಾರುಗಳ ಪ್ರಥಮ ಚಿಕಿತ್ಸೆ ಕಿಟ್ ಕಡ್ಡಾಯವಾಗಿ ಇರಬೇಕು. ರಾತ್ರಿ 8 ರಿಂದ ಬೆಳಗ್ಗೆ 6 ರ ವರಗೆ ಸಾಗಾಟ ನಿಷಿದ್ಧವಾಗಿದ್ದು, ಬೇಸಿಗೆ ಕಾಲದಲ್ಲಿ ಬೆಳಗ್ಗೆ11 ರಿಂದ ಮಧ್ಯಾಹ್ನ 3 ರ ವರೆಗೆ ಸಾಗಾಟ ಮಾಡುವಂತಿಲ್ಲ ಎಂದು ಡಿಸಿ ಜಿ.ಜಗದೀಶ್ ಹೇಳಿದರು.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ನಿಯಮ 2020 ರಲ್ಲಿ, ಜಿಲ್ಲೆಗೆ ಸಂಬoಧಪಟ್ಟ ಆಕ್ಷೇಪಣೆ/ ಸಲಹೆಗಳನ್ನು ಸ್ವೀಕರಿಸಿ, ಸರ್ಕಾರಕ್ಕೆ ತಲುಪಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಹರೀಶ್ ತಮನಕರ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

Leave a Reply

Your email address will not be published. Required fields are marked *

error: Content is protected !!