ಸುಧಾರಿಸಿಕೊಳ್ಳಲು ಸ್ವಲ್ಪ ಸಮಯ ಕೊಡಿ, ನಂತರ ಎಲ್ಲವನ್ನೂ ಹೇಳುತ್ತೇನೆ: ರಾಗಿಣಿ ದ್ವಿವೇದಿ

ಬೆಂಗಳೂರು: ಈಗ ತಾನೆ ಜೈಲಿನಿಂದ ಹೊರಬಂದಿದ್ದೇನೆ. ಸುಧಾರಿಸಿಕೊಳ್ಳಲು ಸ್ವಲ್ಪ ಸಮಯ ಕೊಡಿ, ನಂತರ ಒಂದಿಷ್ಟು ವಿಚಾರವನ್ನು ಹಂಚಿಕೊಳ್ಳುತ್ತೇನೆ ಎಂದು ನಟಿ ರಾಗಿಣಿ ದ್ವಿವೇದಿ ಹೇಳಿದ್ದಾರೆ. 

ಸುಪ್ರೀಂ ಕೋರ್ಟ್ ಜಾಮೀನು ನೀಡಿದ ನಂತರ ಜೈಲಿನಿಂದ ಹೊರಬಂದಿರುವ ರಾಗಿಣಿ ದ್ವಿವೇದಿ ಇಂದು ಸಿಟಿ ಸಿವಿಲ್ ಕೋರ್ಟ್ ನ ಎನ್ ಡಿಪಿಎಸ್ ಕೋರ್ಟ್ ಗೆ ಹಾಜರಾದರು. ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದರು.

ಸದ್ಯ ನಾನು ತನಿಖೆಗೆ ಸಹಕರಿಸುತ್ತೇನೆ. ಅದಾಗಲೇ ಮಾಧ್ಯಮಗಳೇ ಕೆಲ ಸುದ್ದಿಗಳನ್ನು ಬಿತ್ತಿರಿಸಿದ್ದು ನಾನು ಹೇಳುವಂತೆ ಮಹತ್ವದ ವಿಚಾರ ಏನು ಇಲ್ಲ. ಆದರೆ ನನಗೆ ಸ್ವಲ್ಪ ಕಾಲಾವಕಾಶ ಕೊಡಿ ನಂತರ ಎಲ್ಲದರ ಕುರಿತು ಮಾತನಾಡುತ್ತೇನೆ ಎಂದು ಹೇಳಿದರು.

ನಾನು 12 ವರ್ಷಗಳಿಂದ ಕರ್ನಾಟಕದಲ್ಲಿದ್ದೇನೆ. ನಾನು ಯಾರು? ಏನು ಅಂತಾ ಜನರಿಗೆ ಗೊತ್ತಿದೆ ಎಂದು ಹೇಳಿದರು. ಸದ್ಯ ನ್ಯಾಯಾಲಯ ವಿಚಾರಣೆಯನ್ನು ಫೆ.15ಕ್ಕೆ ಮುಂದೂಡಿದೆ. 

Leave a Reply

Your email address will not be published. Required fields are marked *

error: Content is protected !!