ಕೆಂಪುಕೋಟೆಗೆ ನುಗ್ಗಿ ಸಿಖ್ ಧ್ವಜ ಹಾರಟ ಪ್ರಕರಣ- ನಟ ದೀಪ್ ಸಿಧು ಬಂಧನ

ಹೊಸದಿಲ್ಲಿ: ಟ್ರ್ಯಾಕ್ಟರ್ ರ್ಯಾಲಿಯ ವೇಳೆ ಕೆಂಪುಕೋಟೆಗೆ ನುಗ್ಗಿ  ಸಿಖ್ ಧ್ವಜಗಳನ್ನು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದೀಪ್ ಸಿಧುವನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.

ಜ. 26ರಂದು ಟ್ಯಾಕ್ಟರ್ ರ್ಯಾಲಿ ವೇಳೆ ಕೆಂಪುಕೋಟೆಯ ಬಳಿ ನಡೆದ ಗಲಭೆ ನಡೆದಿತ್ತು. ಘಟನೆ ಬಳಿಕ ಪೊಲೀಸರು ನಟನನ್ನು ಹುಡುಕುತ್ತಿದ್ದರು. ಇದೀಗ ತಲೆಮರೆಸಿಕೊಂಡಿದ್ದ ನಟನನ್ನು ಪೊಲೀಸರು ಬಂಧಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಈ ಘಟನೆಗಳಿಗೆ ಸಂಬಂಧಿಸಿದಂತೆ ಇತ್ತೀಚಿಗಷ್ಟೇ ದಿಲ್ಲಿ ಪೊಲೀಸರು 12 ಮಂದಿ ಪ್ರಮುಖ ಆರೋಪಿಗಳ ಭಾವಚಿತ್ರವನ್ನು ಬಿಡುಗಡೆಗೊಳಿಸಿದ್ದರು. ಇದರೊಂದಿಗೆ ದೀಪ್ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಕೂಡಾ ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ನಟ ದೀಪ್ ಸಿಧುವನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!