ಪುತ್ತೂರು: ಮನೆಗಳಿಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದು ಲೂಟಿ

ಕಡತ ಚಿತ್ರ

ಪುತ್ತೂರು: ಮನೆಗಳಿಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದು ದೋಚಿ ಪರಾರಿಯಾದ ಘಟನೆ ಕಡಬ ತಾಲೂಕಿನ ಕುಂತೂರು ಎಂಬಲ್ಲಿ ನಡೆದಿದೆ. 

ಮೊದಲು ಇಲ್ಲಿನ ಅನಿಸ್ ಎಂಬವರ  ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯ ಹಿಂದಿನ ಬಾಗಿಲಿನಿಂದ ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ ಕಪಾಟನ್ನು ಜಾಲಾಡಿದ್ದಾರೆ. ಅಲ್ಲದೆ ಮನೆಯಲ್ಲಿ ಮಲಗಿದ್ದ ಅನಿಸ್ ಅವರ ಪತ್ನಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಹಾಗೂ ಅವರ ತಾಯಿಯ ಕಾಲಲ್ಲಿದ್ದ ಚಿನ್ನವನ್ನು ತೆಗೆಯಲು ಮುಂದಾಗಿದ್ದಾರೆ.

ಸಂದರ್ಭ ಅವರು ಎಚ್ಚರಗೊಂಡಿದ್ದು, ಈ ವೇಳೆ ಕಳ್ಳರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಸುಮಾರು 12 ಪವನ್ ಚಿನ್ನ ಕಳ್ಳತನವಾದ ಬಗ್ಗೆ ವರದಿಯಾಗಿದೆ. 

ಇನ್ನು ಈ ಮನೆಯ ಪಕ್ಕದ ಸೈಮನ್ ಎಂಬುವವರ ಮನೆಯ ಬಾಗಿಲು ಒಡೆದು ಒಳನುಗ್ಗಿ ಮನೆಯಲ್ಲಿದ್ದ ಸುಮಾರು 5000 ರೂ ಕಳ್ಳತನ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಶ್ವಾನ ದಳ ಅಗಮಿಸಿ ಪರಿಶೀಲನೆ ನಡೆಸಿದ್ದು, ಉಪ್ಪಿನಂಗಡಿ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಕಡಬ ಠಾಣಾಧಿಕಾರಿ ರುಕ್ಮ ನಾಯ್ಕ ಪೊಲೀಸರ ತಂಡವು ಸ್ಥಳಕ್ಕೆ ಭೇಟಿ ನೀಡಿದ್ದು ಮಾಹಿತಿ ಕಲೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!