ಜಗದೀಶ್ ಕ್ಷಮೆಯಾಚನೆ – 1ಲಕ್ಷ ರೂ. ಬಡ ಮಕ್ಕಳ ಶಿಕ್ಷಣಕ್ಕೆ: ಪ್ರತಿಭಾ ಕುಳಾಯಿ

ಮಂಗಳೂರು: ಕೋಟಿ ಚೆನ್ನಯ್ಯ ಹಾಗೂ ಕಾ0ಗ್ರೆಸ್ ಮುಖಂಡ ಜನಾರ್ಧನ ಪೋಜಾರಿ ಅವರ ಕುರಿತು ಅವಹೇಳನ ಕಾರಿಯಾಗಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಜಗದೀಶ್ ಅಧಿಕಾರಿ ಅವರ ಮುಖಕ್ಕೆ ಮಸಿ ಬಳಿದರೆ ನೀಡುವುದಾಗಿ ಹೇಳಿದ್ದ ಒಂದು ಲಕ್ಷ ರೂ. ಗಳನ್ನು ಬಡ ಮಕ್ಕಳ ಶಿಕ್ಷಣಕ್ಕಾಗಿ ನೀಡುವುದಾಗಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಅವರು ಘೋಷಿಸಿದ್ದಾರೆ. 

ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಅವರು ಜಗದೀಶ್ ಅವರ ಹೇಳಿಕೆಯನ್ನು ಖಂಡಿಸಿ,  ಅವರು ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಮೂರು ದಿನಗಳಲ್ಲಿ ಕ್ಷಮೆಯಾಚಿಸದಿದ್ದರೆ ಅಧಿಕಾರಿಯ ಮುಖಕ್ಕೆ ಮಸಿ ಬಳಿದವರಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಸಾಮಾಜಿಕ ಜಾಲ ತಾಣದಲ್ಲಿ ಹೇಳಿಕೊಂಡಿದ್ದರು.

ಇದೀಗ ವಿಚಾರಕ್ಕೆ ಸಂಬಂಧಿಸಿದಂತೆ  ಜಗದೀಶ್ ಅಧಿಕಾರಿಯವರು ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ಪ್ರತಿಭಾ ಕುಳಾಯಿ ಅವರು, ಆ ಒಂದು ಲಕ್ಷ ರೂಪಾಯಿ ಹಣವನ್ನು ಸಮಾಜದ ಬಡ ಮಕ್ಕಳ ಶಿಕ್ಷಣಕ್ಕಾಗಿ ನೀಡುವುದಾಗಿ ಹೇಳಿದ್ದಾರೆ.

ನಿನ್ನೆ ರಾತ್ರಿ ಜಗದೀಶ್ ಅಧಿಕಾರಿಯವರು ಕ್ಷಮೆಯಾಚಿಸಲು ಗರೋಡಿಗೆ ಭೇಟಿ ನೀಡಿದ ಕೂಡಲೇ, ಪ್ರತಿಭಾ ಕುಳಾಯಿಯವರು ಫೇಸ್‌ಬುಕ್‌ನಲ್ಲಿ ಲೈವ್‌ನಲ್ಲಿ ಬಂದಿದ್ದು ಈ ಹಿಂದೆ ಘೋಷಿಸಿದ್ದ ಒಂದು ಲಕ್ಷ ರೂಪಾಯಿಯನ್ನು ಬಡ ಕುಟುಂಬಗಳ ಮಕ್ಕಳ ಶಿಕ್ಷಣಕ್ಕಾಗಿ ವ್ಯಯಿಸುವುದಾಗಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!