ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯ ವಿಪಕ್ಷ ನಾಯಕ

ನವದೆಹಲಿ: ರಾಜ್ಯಸಭೆ ಸಂಸದ ಗುಲಾಮ್ ನಭಿ ಆಜಾದ್ ಅವರ ಅವಧಿಪೂರ್ಣಗೊಂಡ ಹಿನ್ನೆಲೆಯಲ್ಲಿ ತೆರವುಗೊಂಡಿರುವ ರಾಜ್ಯಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ

ಕಾಂಗ್ರೆಸ್ ಖರ್ಗೆ ಅವರ ಹೆಸರನ್ನು ಕಳಿಸಿದ್ದು, ಇದೇ ಅಂತಿಮಗೊಳ್ಳಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ 2014 ರಿಂದ 2019 ವರೆಗೆ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರು. ಫೆ.15 ಕ್ಕೆ ಗುಲಾಂ ನಭಿ ಆಜಾದ್ ಅವರ ಅವಧಿ ಪೂರ್ಣಗೊಳ್ಳಲಿದ್ದು ರಾಜ್ಯಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನ ತೆರವುಗೊಳ್ಳಲಿದೆ. 

Leave a Reply

Your email address will not be published. Required fields are marked *

error: Content is protected !!