ಇಂದೋರ್: ಬಸ್ ಕಾಲುವೆಗೆ ಬಿದ್ದು 39 ಪ್ರಯಾಣಿಕರ ದುರ್ಮರಣ

ಇಂದೋರ್: ಚಾಲಕನ ನಿಯಂತ್ರಣ ತಪ್ಪಿದ ಬಸ್‍ವೊಂದು ಕಾಲುವೆಗೆ ಬಿದ್ದು 39 ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯ ಪಾಟ್ನಾ ಗ್ರಾಮದ ಬಳಿ ನಡೆದಿದೆ.

ರಾಜ್ಯ ರಾಜಧಾನಿ ಭೋಪಾಲ್ ನಿಂದ 560 ಕಿ.ಮೀ ದೂರದಲ್ಲಿರುವ ಸಿಧಿ ಜಿಲ್ಲೆಯಲ್ಲಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ನೀರಿನಿಂದ ತುಂಬಿ ಹರಿಯುತ್ತಿದ್ದ ಕಾಲುವೆಗೆ ಉರುಳಿ ಬಿದ್ದಿದೆ. ಸಿಧಿಯಿಂದ ಸತ್ನಾ ಕಡೆ ಹೊರಟಿದ್ದ ಬಸ್ಸಿನಲ್ಲಿ ಒಟ್ಟು 57 ಮಂದಿ ಪ್ರಯಾಣಿಕರಿದ್ದರು. ದುರಂತದಲ್ಲಿ, 39 ಮಂದಿ ಮೃತಪಟ್ಟಿದ್ದಾರೆ. ಈ ವರೆಗೆ 10 ಮಂದಿಯನ್ನು ರಕ್ಷಿಸಲಾಗಿದ್ದು,8 ಮಂದಿಗಾಗಿ ರಕ್ಷಣಾ ಕಾರ್ಯನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!